‘ಮುಂಬೈನ ಎನ್ಐಎ ವಿಶೇಷ ನ್ಯಾಯಾಲಯದ ವ್ಯಾಪ್ತಿಯನ್ನು ತೊರೆಯಬಾರದು ಎಂಬ ಷರತ್ತಿನ ಮೇಲೆ ಬಾಂಬೆ ಹೈಕೋರ್ಟ್, ರಾವ್ ಅವರಿಗೆ ವೈದ್ಯಕೀಯ ಚಿಕಿತ್ಸೆ ಆಧಾರದಲ್ಲಿ ಜಾಮೀನು ನೀಡಿದೆ. ಹೀಗಾಗಿ, ಅವರ ಜಾಮೀನು ಷರತ್ತು ಸಡಿಲಿಸುವಂತೆ ಕೋರುವತನಕ ರಾಜ್ಯ ಪೊಲೀಸರು ಅವರನ್ನು ಬಂಧಿಸುವುದಿಲ್ಲ’ ಎಂದು ಹೆಗಡೆ ವಿವರಿಸಿದರು. ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ವರವರ ರಾವ್ ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿದೆ.