ಇದೇ ಸಂದರ್ಭದಲ್ಲಿ ಪ್ರವಾಸಿ ಮಂದಿರದ ಮತ್ತೊಂದು ಬದಿಯಲ್ಲಿ ಡಿವೈಎಸ್ಪಿ ಗೋಪಾಲಕೃಷ್ಣ ನೇತೃತ್ವದ ಸಿಐಡಿ ತಂಡವು ಘಟನೆ ವೇಳೆ ರಾಯ್ ಡಿಸೋಜಾ ಧರಿಸಿದ್ದ ಬಟ್ಟೆಗಳ ಮಹಜರು ನಡೆಸಿತು. ಜತೆಗೆ, ಮೆಟಿಲ್ಡಾ ಲೋಬೊ, ರಾಬಿನ್ ಡಿಸೋಜಾ ಹಾಗೂ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಿಕೊಂಡಿತು. ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.