2008ನೇ ಸಾಲಿನಲ್ಲಿ ಕಾನ್ಸ್ಟೆಬಲ್ ಹುದ್ದೆಗೆ ಆಯ್ಕೆಯಾಗಿದ್ದ ಸನಾವುಲ್ಲಾ, ಈ ಮೊದಲು ಬಸವನಗರ ಪೊಲೀಸ್ ಠಾಣೆಯ ವಾಹನ ಚಾಲಕರಾಗಿದ್ದರು. 2014ರಲ್ಲಿ ಮುಸ್ಲಿಂ ಹುಡುಗಿಯೊಬ್ಬಳು ಅನ್ಯ ಕೋಮಿನಹುಡುಗನ ಜೊತೆಗೆ ಓಡಾಡುತ್ತಿದ್ದಾಳೆ ಎಂಬ ಕಾರಣಕ್ಕೆ ಸನಾವುಲ್ಲಾ ಹಾಗೂ ಅವರ ಸ್ನೇಹಿತರು ಹುಡುಗನ ಮೇಲೆ ಹಲ್ಲೆ ಮಾಡಿದ್ದರು. ಆಗಲೂ ಅವರನ್ನು ಅಮಾನತುಗೊಳಿಸಲಾಗಿತ್ತು. ಸನಾವುಲ್ಲಾ ಸದ್ಯ ವಿನೋಬನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಪಾಕಿಸ್ತಾನ ಪರ ಸಂದೇಶವನ್ನು ಹಂಚಿಕೊಂಡ ಪ್ರಕರಣ ವಿವಾದ ಪಡೆಯುತ್ತಿದ್ದಂತೆ ಅವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.