ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತನಿಖೆಗಾಗಿ ನಿಮಗೂ ನೋಟಿಸ್ ನೀಡಬೇಕಲ್ಲವೇ: ಅರಗ ಜ್ಞಾನೇಂದ್ರಗೆ ಕಾಂಗ್ರೆಸ್ ಪ್ರಶ್ನೆ

ಪಿಎಸ್‌ಐ ನೇಮಕಾತಿ ಅಕ್ರಮ
Last Updated 27 ಏಪ್ರಿಲ್ 2022, 7:06 IST
ಅಕ್ಷರ ಗಾತ್ರ

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ –ಬಿಜೆಪಿ ನಾಯಕರ ಮಧ್ಯೆ ಪರಸ್ಪರ ವಾಗ್ದಾಳಿ, ಕೆಸರೆರಚಾಟ ಜೋರಾಗಿದೆ.

ಪ್ರಕರಣಸಂಬಂಧವಿಡಿಯೊ ಸಮೇತ ಟ್ವೀಟ್ ಮಾಡಿರುವ ಕಾಂಗ್ರೆಸ್, ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಕಿಡಿಕಾರಿದೆ.

‘ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮವೇ ಆಗಿಲ್ಲವೆಂದು ಇಷ್ಟು ಆತ್ಮವಿಶ್ವಾಸದಿಂದ ಸದನದಲ್ಲಿ ಸಮರ್ಥಿಸಿದ ಅರಗ ಜ್ಞಾನೇಂದ್ರ ಅವರೇ, ಈ ಸಮರ್ಥನೆಗೂ, ದಿವ್ಯಾ ಹಾಗರಗಿ ಬಂಧನ ಆಗದಿರುವುದಕ್ಕೂ, ನೀವು ಅವರ ಆದರಾತಿಥ್ಯ ಸ್ವೀಕರಿಸಿದ್ದಕ್ಕೂ ಗಾಢಸಂಬಂಧ ಇದೆಯಲ್ಲವೇ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

‘ಪ್ರಕರಣಕ್ಕೆ ಸಂಬಂಧಿಸಿ ನಿಮ್ಮ ಸಮರ್ಥನೆಯನ್ನು ಬಾಲಿಶತನ ಎನ್ನೋಣವೇ?, ಸಿಐಡಿ ತನಿಖೆಗಾಗಿ ನಿಮಗೂ ನೋಟಿಸ್ ನೀಡಬೇಕಲ್ಲವೇ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ರುದ್ರಗೌಡ ಡಿ. ಪಾಟೀಲ ಸೇರಿದಂತೆ ಹಲವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿದಂತೆ ಇತರೆ ಆರೋಪಿಗಳು ಎರಡು ವಾರಗಳಿಂದ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT