ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಮತ್ತು ಶಾಸಕ ಪ್ರಿಯಾಂಕ್ ಖರ್ಗೆ ಪತ್ರಿಕಾಗೋಷ್ಠಿ ನಿಗದಿಯಾಗಿತ್ತು. ಗೋಷ್ಠಿ ಆರಂಭಕ್ಕೂ ಮೊದಲೇ ಮಫ್ತಿಯಲ್ಲಿ ಬಂದಿದ್ದ ಗುಪ್ತದಳದ ಪೊಲೀಸ್ ಇನ್ಸ್ಪೆಕ್ಟರ್ ಕಾತ್ಯಾಯಿನಿ ಆಳ್ವ ಮತ್ತು ಸಿಬ್ಬಂದಿ ಸಭಾಂಗಣದಲ್ಲಿ ಆಸೀನರಾಗಿದ್ದರು. ಪತ್ರಿಕಾಗೋಷ್ಠಿ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡ ಎಂ. ರಾಮಚಂದ್ರಪ್ಪ ಮತ್ತು ಕೆಲವು ಕಾರ್ಯಕರ್ತರು, ಪೊಲೀಸ್ ಅಧಿಕಾರಿಗಳು ಅಲ್ಲಿರುವುದನ್ನು ಗುರುತಿಸಿದರು.