‘ನನ್ನ ವಿರುದ್ಧ ರಾತ್ರಿ 11.30ಕ್ಕೆ ಪ್ರಕರಣ ದಾಖಲಾಗಿದ್ದರೂ, ಮಧ್ಯರಾತ್ರಿ 3ಕ್ಕೆ ಕರೆ ಮಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ತಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ. ಈ ವಿಷಯದಲ್ಲಿ ತಮ್ಮ ಮಾರ್ಗದರ್ಶನ ಅಗತ್ಯ ಎಂದರು. ಸಭಾಪತಿಯಾಗಿ ನನ್ನ ಪರಿಸ್ಥಿತಿಯೇ ಹೀಗಾದರೆ, ಇನ್ನು ಇಂಥ ವಿಷಯದಲ್ಲಿ ಸಾಮಾನ್ಯ ಜನರ ಪಾಡೇನು ಎಂಬ ಚಿಂತೆ ಕಾಡುತ್ತಿದೆ. ಸ್ಥಳದಲ್ಲಿ ನಾನಿಲ್ಲದಿದ್ದರೂ ಪ್ರಕರಣ ದಾಖಲಾಗಿದೆ. ದೂರು ಸತ್ಯಕ್ಕೆ ದೂರವಾಗಿದ್ದು, ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ನ್ಯಾಯಾಲಯದಲ್ಲಿ ಕೋರಲಾಗಿದೆ’ ಎಂದು ಹೊರಟ್ಟಿ ಹೇಳಿದರು.