ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂತ್ರ ನೆಕ್ಕಿಸಿದ ಪ್ರಕರಣ: ಪಿಎಸ್‌ಐಗೆ ಜಾಮೀನು ನಿರಾಕರಣೆ

Last Updated 27 ಸೆಪ್ಟೆಂಬರ್ 2021, 20:12 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಪರಿಶಿಷ್ಟ ಜಾತಿಯ ಯುವಕನಿಗೆ ಠಾಣೆಯಲ್ಲಿ ಮೂತ್ರ ನೆಕ್ಕಿಸಿದ ಆರೋಪ ಎದುರಿಸುತ್ತಿರುವ ಪಿಎಸ್‌ಐ ಅರ್ಜುನ್‌ ಅವರಿಗೆ ಜಾಮೀನು ನೀಡಲು ನಗರದ ಒಂದನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್‌ ಸೋಮವಾರ ನಿರಾಕರಿಸಿದೆ.

ನ್ಯಾಯಾಧೀಶೆ ಬಿ. ಪುಷ್ಪಾಂಜಲಿ ಅವರು ಅರ್ಜಿ ವಿಚಾರಣೆ ನಡೆಸಿದರು. ಕೆಲ ದಿನಗಳ ಹಿಂದೆ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತವಾಗಿತ್ತು.

ಮೂಡಿಗೆರೆ ತಾಲ್ಲೂಕಿನ ಕಿರಗುಂದದ ಪುನೀತ್‌ ಎಂಬವರಿಗೆ ಗೋಣಿಬೀಡು ಠಾಣೆಯಲ್ಲಿ ಮೂತ್ರ ನೆಕ್ಕಿಸಿದ್ದಾರೆ ಎಂಬ ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರ್ಜುನ್‌ನನ್ನು ಬೆಂಗಳೂರಿನಲ್ಲಿ ಸೆ.1ರಂದು ಸಿಐಡಿ ಪೊಲೀಸರು ಬಂಧಿಸಿ, ಚಿಕ್ಕಮಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT