‘ದಾಖಲೆ ಇದ್ದರೆ ಕೊಡಿ ಎನ್ನುತ್ತಿದ್ದಾರೆ. ಹೀಗೆ ಹೇಳುವ ಮೂಲಕ ಪ್ರಕರಣವನ್ನು ಹಳ್ಳ ಹಿಡಿಸಲು ಯತ್ನಿಸುತ್ತಿದ್ದಾರೆ. ದಲ್ಲಾಳಿಗಳೇ ಸರ್ಕಾರದ ಆಡಳಿತ ನಡೆಸುವ ಸ್ಥಿತಿಯನ್ನು ಸಿ.ಎಂ ಸೃಷ್ಟಿ ಮಾಡಿಕೊಂಡಿದ್ದಾರೆ. ಕುಮಾರಕೃಪ ಹೊಸ ಕಟ್ಟಡದಲ್ಲಿ ಏನೆಲ್ಲಾ ನಡೆಯಿತು? ಬೆಂಕಿ ಇಲ್ಲದೆ ಹೊಗೆ ಬರುತ್ತಾ? ನಿಮ್ಮ ತಂದೆಯವರು ಹೇಳಿಕೊಟ್ಟಿದ್ದು ಇದೇನಾ? ಎಂದು ಮುಖ್ಯಮಂತ್ರಿ ಅವರನ್ನು ಪ್ರಶ್ನಿಸಿದರು.