<p><strong>ಬೆಂಗಳೂರು:</strong> ಪಿಎಸ್ಐ ನೇಮಕಾತಿಯಲ್ಲಿ ನಡೆದ ಅಕ್ರಮಗಳ ಒಳಸುಳಿಗಳು ಹೊರಬರುತ್ತಿರುವ ಬೆನ್ನಲ್ಲೆ, ಪೊಲೀಸ್ ನೇಮಕಾತಿ ಮಂಡಳಿಯ ಎಡಿಜಿಪಿ ಅಮೃತ್ ಪಾಲ್ ಅವರನ್ನು ಎತ್ತಂಗಡಿ ಮಾಡಲಾಗಿದೆ.</p>.<p>ಅಪರಾಧ ಮತ್ತು ತಾಂತ್ರಿಕ ಸೇವೆಗಳು ಘಟಕದ ಎಡಿಜಿಪಿ ಆರ್. ಹಿತೇಂದ್ರ ಅವರಿಗೆ ಪೊಲೀಸ್ ನೇಮಕಾತಿ ಮಂಡಳಿಯ ಎಡಿಜಿಪಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.</p>.<p>ಅಮೃತ್ ಪಾಲ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ನಿಯೋಜಿಸಲಾಗಿದೆ.</p>.<p>545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ಖಚಿತವಾಗುತ್ತಿದ್ದಂತೆ ಅಮೃತ್ ಪಾಲ್ ಅವರ ವರ್ಗಾವಣೆಗೆ ಪೊಲೀಸ್ ವಲಯದಲ್ಲಿಯೇ ಒತ್ತಡ ಹೆಚ್ಚಾಗಿತ್ತು.</p>.<p>'ಅಕ್ರಮದ ಬಗ್ಗೆ ಕೆಲವು ಅಭ್ಯರ್ಥಿಗಳು ನೇರವಾಗಿ ದೂರು ನೀಡಿದ್ದರೂ ಪಾಲ್ ಅವರು ನಿರ್ಲಕ್ಷ್ಯ ವಹಿಸಿದ್ದರು. ಅಲ್ಲದೆ, ಇಡೀ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಕೆಲವು ಅಧಿಕಾರಿಗಳೂ ಕೂಡಾ ಶಾಮೀಲಾಗಿರುವ ಅನುಮಾನ ವ್ಯಕ್ತವಾಗಿದೆ. ಹೀಗಾಗಿ, ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗಿಯಾದ ಕೆಲವು ಅಧಿಕಾರಿಗಳ ವರ್ಗಾವಣೆಯ ಬಗ್ಗೆಯೂ ಚರ್ಚೆ ನಡೆಯುತ್ತಿದೆ' ಎಂದು ಗೃಹ ಇಲಾಖೆಯ ಮೂಲಗಳು ಹೇಳಿವೆ.</p>.<p>ಇದನ್ನೂ ಓದಿ.. <a href="https://www.prajavani.net/district/kalaburagi/one-more-accused-arrested-in-psi-appointment-exam-scam-931702.html"><strong>ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಮತ್ತೊಬ್ಬ ಆರೋಪಿ ಎನ್.ವಿ. ಸುನೀಲ ಕುಮಾರ ಬಂಧನ</strong></a><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪಿಎಸ್ಐ ನೇಮಕಾತಿಯಲ್ಲಿ ನಡೆದ ಅಕ್ರಮಗಳ ಒಳಸುಳಿಗಳು ಹೊರಬರುತ್ತಿರುವ ಬೆನ್ನಲ್ಲೆ, ಪೊಲೀಸ್ ನೇಮಕಾತಿ ಮಂಡಳಿಯ ಎಡಿಜಿಪಿ ಅಮೃತ್ ಪಾಲ್ ಅವರನ್ನು ಎತ್ತಂಗಡಿ ಮಾಡಲಾಗಿದೆ.</p>.<p>ಅಪರಾಧ ಮತ್ತು ತಾಂತ್ರಿಕ ಸೇವೆಗಳು ಘಟಕದ ಎಡಿಜಿಪಿ ಆರ್. ಹಿತೇಂದ್ರ ಅವರಿಗೆ ಪೊಲೀಸ್ ನೇಮಕಾತಿ ಮಂಡಳಿಯ ಎಡಿಜಿಪಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.</p>.<p>ಅಮೃತ್ ಪಾಲ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ನಿಯೋಜಿಸಲಾಗಿದೆ.</p>.<p>545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ಖಚಿತವಾಗುತ್ತಿದ್ದಂತೆ ಅಮೃತ್ ಪಾಲ್ ಅವರ ವರ್ಗಾವಣೆಗೆ ಪೊಲೀಸ್ ವಲಯದಲ್ಲಿಯೇ ಒತ್ತಡ ಹೆಚ್ಚಾಗಿತ್ತು.</p>.<p>'ಅಕ್ರಮದ ಬಗ್ಗೆ ಕೆಲವು ಅಭ್ಯರ್ಥಿಗಳು ನೇರವಾಗಿ ದೂರು ನೀಡಿದ್ದರೂ ಪಾಲ್ ಅವರು ನಿರ್ಲಕ್ಷ್ಯ ವಹಿಸಿದ್ದರು. ಅಲ್ಲದೆ, ಇಡೀ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಕೆಲವು ಅಧಿಕಾರಿಗಳೂ ಕೂಡಾ ಶಾಮೀಲಾಗಿರುವ ಅನುಮಾನ ವ್ಯಕ್ತವಾಗಿದೆ. ಹೀಗಾಗಿ, ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗಿಯಾದ ಕೆಲವು ಅಧಿಕಾರಿಗಳ ವರ್ಗಾವಣೆಯ ಬಗ್ಗೆಯೂ ಚರ್ಚೆ ನಡೆಯುತ್ತಿದೆ' ಎಂದು ಗೃಹ ಇಲಾಖೆಯ ಮೂಲಗಳು ಹೇಳಿವೆ.</p>.<p>ಇದನ್ನೂ ಓದಿ.. <a href="https://www.prajavani.net/district/kalaburagi/one-more-accused-arrested-in-psi-appointment-exam-scam-931702.html"><strong>ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಮತ್ತೊಬ್ಬ ಆರೋಪಿ ಎನ್.ವಿ. ಸುನೀಲ ಕುಮಾರ ಬಂಧನ</strong></a><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>