ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅಭ್ಯರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‘ಸ್ವಚ್ಛವಾಗಿದ್ದರೆ ಆಯ್ದ ಸರ್ಕಾರ; ಹಾಕಿರಿ ಜೈಕಾರ, ಸರ್ಕಾರವೇ ನಡೆಸಿದರೆ ಭ್ರಷ್ಟಾಚಾರ; ತೋರಿಸಿರಿ ಪ್ರಜಾಪ್ರಭುತ್ವದ ಅಧಿಕಾರ’ ಎಂಬ ಭಿತ್ತಿಪತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.