‘ಮೋಹನ್ ಕುಮಾರ್ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ಅಧಿಕಾರಿ. ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಅವರು, ಮಗಳ ಮೂಲಕ ಈ ರೀತಿಯ ಆರೋಪಗಳನ್ನು ಮಾಡಿಸಿದ್ದಾರೆ. ಮೋಹನ್ ಕುಮಾರ್ ಅವರ ವರ್ಗಾವಣೆಗೆ ಸಂಬಂಧಿಸಿದ ಯಾವುದೇ ಪ್ರಸ್ತಾವ ತಮ್ಮ ಎದುರು ಬಂದಿರಲಿಲ್ಲ. ಲಂಚದ ಬೇಡಿಕೆ ಇಟ್ಟಿಲ್ಲ ಎಂದು ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಾಲಯದಲ್ಲಿ ಪ್ರಮಾಣ ಮಾಡುವುದಕ್ಕೆ ಸಿದ್ಧ’ ಎಂದು ಹೇಳಿದರು.