ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶ್ವರಪ್ಪ ವಿರುದ್ಧದ ಕಾಂಗ್ರೆಸ್ ಹೋರಾಟದ ಹಿಂದೆ ರಾಜಕೀಯ: ಕುಮಾರಸ್ವಾಮಿ

Last Updated 15 ಏಪ್ರಿಲ್ 2022, 19:30 IST
ಅಕ್ಷರ ಗಾತ್ರ

ಆಲಮಟ್ಟಿ: ‘ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಯಲ್ಲಿ ಕಾಂಗ್ರೆಸ್ ಒಣ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಗೆ ಮಾಡಲು ಬೇರೆ ಕೆಲಸವಿಲ್ಲ, ಅದಕ್ಕಾಗಿ ಇದೇ ವಿಷಯವನ್ನು ದೊಡ್ಡದಾಗಿ ಮಾಡುತ್ತಿದೆ’ ಎಂದು ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದರು.

ಆಲಮಟ್ಟಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಈಶ್ವರಪ್ಪ ಒಬ್ಬರೇ ಶೇ 40 ಕಮಿಷನ್ ಕೇಳಿದ್ದಾರೆ ಎಂದು ಸಂತೋಷ್‌ ಆರೋಪಿಸಿಲ್ಲ. ಈಶ್ವರಪ್ಪ ರಾಜೀನಾಮೆ ಕೊಟ್ಟರೂ ಕಾಂಗ್ರೆಸ್ ನವರು ಈಗ ಅವರ ಬಂಧನ ಮಾಡಬೇಕು ಅಂತ ಹೇಳ್ತಿದ್ದಾರೆ. ಇದು ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತೆ. ಕಾಂಗ್ರೆಸ್ ಏನು ಮಾಡಿದ್ರು ಅನ್ನೋದು ಗೊತ್ತಿದೆ. ಕಾಂಗ್ರೆಸ್ ಒಂದು ನಯಾ ಪೈಸೆ ಕಮೀಷನ್ ಪಡೆಯದೆ ಕೆಲಸ ಮಾಡಿದೆಯಾ? ಇದು ಕಾಂಗ್ರೆಸ್‌ ರಾಜಕೀಯ’ ಎಂದು ಲೇವಡಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT