ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮಣ್ಣ– ಅಶೋಕ ಮಧ್ಯೆ ಉಸ್ತುವಾರಿ ಗುದ್ದಾಟ: ಚರ್ಚೆಗೆ ಗ್ರಾಸವಾದ ಬೆಳವಣಿಗೆ

Last Updated 10 ಅಕ್ಟೋಬರ್ 2021, 1:36 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ನಗರದ ಉಸ್ತುವಾರಿಗಾಗಿ ಸಚಿವರ ಮಧ್ಯೆ ಜಟಾಪಟಿ ಮುಂದುವರಿದಿದೆ. ಕಂದಾಯ ಸಚಿವ ಆರ್‌. ಅಶೋಕ ವಿರುದ್ಧ ವಸತಿ ಸಚಿವ ವಿ. ಸೋಮಣ್ಣ ಶನಿವಾರ ಏಕವಚನದಲ್ಲೇ ಹರಿಹಾಯ್ದಿದ್ದಾರೆ.

ನಗರದ ಆಡಳಿತದ ಮೇಲೆ ಹಿಡಿತ ಸಾಧಿಸಲು ಅಶೋಕ ಪ್ರಯತ್ನಿಸುತ್ತಿದ್ದಾರೆ ಎಂದು ನಗರದ ಬಿಜೆಪಿಯ ಶಾಸಕರು ಮುನಿಸಿಕೊಂಡಿದ್ದಾರೆ ಎಂಬ ಚರ್ಚೆ ಬಿಜೆಪಿ ವಲಯದಲ್ಲಿ ಹರಿದಾಡಿತ್ತು.

ಶನಿವಾರ ಬಿಜೆಪಿ ರಾಜ್ಯ ಘಟಕದ ಕಚೇರಿಗೆ ಭೇಟಿ ನೀಡಿದ ಸೋಮಣ್ಣ, ಅಲ್ಲಿ ಬಹಿರಂಗವಾಗಿಯೇ ಅಶೋಕ ವಿರುದ್ಧ ಅಸಮಾಧಾನ ಹೊರಹಾಕಿದ್ದಲ್ಲದೇ, ಬೆಂಗಳೂರು ನಗರದ ಉಸ್ತುವಾರಿಯ ಸ್ಪರ್ಧೆಯಲ್ಲಿರುವುದಾಗಿಯೂ ಹೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಅಶೋಕ, ತಾವು ಬೆಂಗಳೂರು ಉಸ್ತುವಾರಿ ಬಯಸಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT