ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂಡವರ ಮೇಲೆ ಹಲ್ಲೆ ಮಾಡುವುದು, ಕೊಲ್ಲುವುದು ಕಾಂಗ್ರೆಸ್‌ನ ಚಾಳಿಯಲ್ಲವೇ: ಬಿಜೆಪಿ

Last Updated 8 ಅಕ್ಟೋಬರ್ 2021, 10:02 IST
ಅಕ್ಷರ ಗಾತ್ರ

ಬೆಂಗಳೂರು: ‘ಕಂಡವರ ಮೇಲೆ ಹಲ್ಲೆ ಮಾಡುವುದು, ಕೊಲ್ಲುವುದು ಕಾಂಗ್ರೆಸ್‌ ಪಕ್ಷದ ಹಳೆಯ ಚಾಳಿಯಲ್ಲವೇ’ ಎಂದು ಬಿಜೆಪಿ ಟೀಕಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆ ಪ್ರಸ್ತಾಪಿಸಿ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ‘ಡಿ.ಕೆ.ಶಿವಕುಮಾರ್‌ ಅವರೇ, ಜನರು ಈಗಾಗಲೇ ನಿಮ್ಮ ಹಾಗೂ‌ ನಿಮ್ಮ ಪಕ್ಷದ ಮುಖಂಡರ ಭಾವಚಿತ್ರ ತೆಗೆದುಕೊಳ್ಳಲಾರಂಭಿಸಿದ್ದಾರೆ. ಕಂಡ ಕಂಡವರ ಮೇಲೆ ಹಲ್ಲೆ ಮಾಡುವುದು, ಕೊಲ್ಲುವುದು ನಿಮ್ಮ ಪಕ್ಷದ ಹಳೆಯ ಚಾಳಿಯಲ್ಲವೇ? ಸಾವಿರಾರು ಮುಗ್ದ ಸಿಖ್ಖರಿಗೂ, ನಾವು ಕಾಂಗ್ರೆಸ್ಸಿಗರಿಂದ ಕೊಲ್ಲಲ್ಪಡುತ್ತೇವೆ ಎಂಬ ಸುಳಿವಿರಲಿಲ್ಲ’ ಎಂದು ತಿರುಗೇಟು ನೀಡಿದೆ.

‘ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ...’ ಎಂದು ಡಿ.ಕೆ ಶಿವಕುಮಾರ್‌ ಅವರು ಗುರುವಾರ ಬಿಜೆಪಿಯನ್ನು ವ್ಯಂಗ್ಯವಾಡಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿರುವ ಬಿಜೆಪಿ, ‘ಶಿವಕುಮಾರ್‌ ಅವರೇ, ನಿಮ್ಮ ಬಳಿ ಬರುವವರು ಏನು ಮಾಡಬೇಕು? ತಲೆಗೆ ಹೆಲ್ಮೆಟ್‌ ಧರಿಸಿಕೊಂಡು ಬರಬೇಕೇ?’ ಎಂದು ವಿಡಿಯೊವೊಂದನ್ನು ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT