ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಡಿ.ಕೆ.ಶಿವಕುಮಾರ್ ಅವರೇ, ಜನರು ಈಗಾಗಲೇ ನಿಮ್ಮ ಹಾಗೂ ನಿಮ್ಮ ಪಕ್ಷದ ಮುಖಂಡರ ಭಾವಚಿತ್ರ ತೆಗೆದುಕೊಳ್ಳಲಾರಂಭಿಸಿದ್ದಾರೆ. ಕಂಡ ಕಂಡವರ ಮೇಲೆ ಹಲ್ಲೆ ಮಾಡುವುದು, ಕೊಲ್ಲುವುದು ನಿಮ್ಮ ಪಕ್ಷದ ಹಳೆಯ ಚಾಳಿಯಲ್ಲವೇ? ಸಾವಿರಾರು ಮುಗ್ದ ಸಿಖ್ಖರಿಗೂ, ನಾವು ಕಾಂಗ್ರೆಸ್ಸಿಗರಿಂದ ಕೊಲ್ಲಲ್ಪಡುತ್ತೇವೆ ಎಂಬ ಸುಳಿವಿರಲಿಲ್ಲ’ ಎಂದು ತಿರುಗೇಟು ನೀಡಿದೆ.