ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿ ಯಾಗಿದೆ. ರಾಜ್ಯದಲ್ಲಿ ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯ ಲಿದೆ. ಮೇ 13ರಂದು ಮತ ಎಣಿಕೆ ಜರುಗಲಿದೆ.
ಈ ವಿಧಾನಸಭೆಯ ಅವಧಿ ಮೇ 24ರಂದು ಕೊನೆಗೊಳ್ಳಲಿದ್ದು, ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ‘ಬುಧವಾರ ದಿಂದಲೇ ನೀತಿಸಂಹಿತೆ ಜಾರಿಗೆ ಬಂದಿದೆ. ನೀತಿಸಂಹಿತೆ ನಿಬಂಧನೆಗಳು ಎಲ್ಲ ಅಭ್ಯರ್ಥಿಗಳು, ಎಲ್ಲ ರಾಜಕೀಯ ಪಕ್ಷಗಳು ಹಾಗೂ ರಾಜ್ಯ ಸರ್ಕಾರಕ್ಕೆ ಅನ್ವಯಿಸುತ್ತದೆ. ಕರ್ನಾಟಕ ಸರ್ಕಾರಕ್ಕೆ ಸಂಬಂಧಿಸಿದ ಘೋಷಣೆಗಳು, ನೀತಿ ಹಾಗೂ ನಿರ್ಧಾರಗಳು ಸೇರಿದಂತೆ ಮಾದರಿ ನೀತಿಸಂಹಿತೆಯು ಕೇಂದ್ರ ಸರ್ಕಾರಕ್ಕೂ ಅನ್ವಯಿಸುತ್ತದೆ’ ಎಂದು ಸ್ಪಷ್ಟಪಡಿಸಿದರು.
‘ಬುಡಕಟ್ಟು ಪ್ರದೇಶಗಳಲ್ಲಿ (ಜೇನುಕುರುಬರು, ಬೆಟ್ಟಕುರುಬರು) ಮತದಾನಕ್ಕೆ ಉತ್ತೇಜಿಸಲು 40 ಮತ ಗಟ್ಟೆಗಳನ್ನು (ಎಥ್ನಿಕ್ ಪೋಲಿಂಗ್ ಸ್ಟೇಷನ್) ಸ್ಥಾಪಿಸಲಾಗುತ್ತದೆ. ತೃತೀಯ ಲಿಂಗಿಗಳ ಪಾಲ್ಗೊಳ್ಳುವಿಕೆಗೆ ವಿಶೇಷ ಒತ್ತು ನೀಡಲಾಗುತ್ತಿದೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.