‘ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ವಿರೋಧ ಇಲ್ಲ. ಆದರೆ, ಕುಲಶಾಸ್ತ್ರೀಯ ಅಧ್ಯಯನದ ವರದಿ ತೆಗೆದುಕೊಂಡು, ಶಿಫಾರಸು ಮಾಡಬೇಕು. ನಾಯಕರು, ಕುರುಬರು, ಉಪ್ಪಾರರು, ಗೊಲ್ಲರು, ಬೆಸ್ತರ ಸಂಖ್ಯೆಗೆ ಅನುಗುಣವಾಗಿ ಎಸ್.ಟಿ ಮೀಸಲಾತಿ ಪ್ರಮಾಣವನ್ನು ಕನಿಷ್ಠ ಶೇ 25ಕ್ಕೆ ಹೆಚ್ಚಿಸಬೇಕು. ಇಲ್ಲದಿದ್ದರೆ, ಯಾವುದೇ ಪ್ರಯೋಜನವಾಗುವುದಿಲ್ಲ’ ಎಂದರು.