ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋಳಿ ಕೇಳಿ ಮಸಾಲೆ ಅರೆಯುವುದಿಲ್ಲ ಎಂಬುದು ಹಳ್ಳಿ ಕಡೆಯಲ್ಲಿ ಚಾಲ್ತಿಯಲ್ಲಿರುವ ಮಾತು. ಆದರೆ, ನಾವು ಆ ರೀತಿ ವರ್ತಿಸುವುದಿಲ್ಲ. ಈ ವಿಷಯದಲ್ಲಿ ವಿಸ್ತೃತ ಚರ್ಚೆ ಆಗಬೇಕು ಎಂದು ಬಯಸುತ್ತೇವೆ. ಆ ಬಳಿಕವೇ ಜಾರಿಗೆ ಆಗಲಿ. ಇಂದಿರಾಗಾಂಧಿ ಕಾಲದಲ್ಲಿ ಸಂಜಯ್ಗಾಂಧಿ ಬ್ರಿಗ್ರೇಡ್ ಸಿಕ್ಕವರನ್ನು ಕರೆದುಕೊಂಡು ಬಂದು ಕಟ್ ಮಾಡುತ್ತಿದ್ದರು. ನಾವು ಹಾಗೇ ಮಾಡುವುದಿಲ್ಲ’ ಎಂದರು.