ಕೋವಿಡ್ ಅನ್ನು ಈಗ ಇಬ್ಬರು ಸಚಿವರು ನಿರ್ವಹಿಸುತ್ತಿದ್ದು, ಪರಸ್ಪರ ವಿರೋಧಾಭಾಸದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರಿಂದ ಸರ್ಕಾರದ ನಿರ್ಧಾರಗಳಲ್ಲೂ ವ್ಯತ್ಯಾಸ ಆಗುತ್ತಿದ್ದು, ಕೋವಿಡ್ ನಿಯಂತ್ರಣ ಆಗದಿರುವುದು ಮುಖ್ಯಮಂತ್ರಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕೋವಿಡ್ ಬಗ್ಗೆ ವೈಜ್ಞಾನಿಕ ಮಾಹಿತಿಯ ಜತೆಗೆ ವೈದ್ಯರು ಮತ್ತು ಅಧಿಕಾರಿಗಳ ಜತೆ ಸಮಾಲೋಚನೆ ನಡೆಸುವ ಸಾಮರ್ಥ್ಯ ಇದ್ದರಷ್ಟೇ, ಅದರ ನಿರ್ವಹಣೆ ಸುಗಮವಾಗಬಲ್ಲದು ಎಂಬ ಕಾರಣಕ್ಕೆ ಈ ಬದಲಾವಣೆ ಮಾಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ.