ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಮುಖ ಸಚಿವರ ಖಾತೆಗಳನ್ನು ಬದಲಾವಣೆ ಮಾಡಿದ್ದು, ಬಿ.ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಖಾತೆ ನೀಡಿದ್ದು, ಡಾ.ಕೆ.ಸುಧಾಕರ್ ಅವರಿಗೆ ಆರೋಗ್ಯ ಖಾತೆ ಹಂಚಿಕೆ ಮಾಡಲಾಗಿದೆ.
ಉಪಮುಖ್ಯಮಂತ್ರಿ ಗೋವಿಂದಕಾರಜೋಳ ಅವರ ಬಳಿ ಲೋಕೋಪಯೋಗಿ ಖಾತೆ ಉಳಿದಿದೆ. ರಾಮುಲು ಬಳಿ ಇದ್ದ ಹಿಂದುಳಿದ ವರ್ಗಗಳ ಖಾತೆ ಮುಖ್ಯಮಂತ್ರಿ ತಮ್ಮ ಬಳಿ ಇಟ್ಟುಕೊಂಡಿದ್ದಾರೆ.
ಕೋವಿಡ್ ಬಗ್ಗೆ ವೈಜ್ಞಾನಿಕ ಮಾಹಿತಿಯ ಜತೆಗೆ ವೈದ್ಯರು ಮತ್ತು ಅಧಿಕಾರಿಗಳ ಜತೆ ಸಮಾಲೋಚನೆ ನಡೆಸುವ ಸಾಮರ್ಥ್ಯ ಇದ್ದರಷ್ಟೇ, ಅದರ ನಿರ್ವಹಣೆ ಸುಗಮವಾಗಬಲ್ಲದು ಎಂಬ ಕಾರಣಕ್ಕೆ ಈ ಬದಲಾವಣೆ ಮಾಡಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.