ಪಂಜಾಬ್ನ ಅಮೃತಸರದಲ್ಲಿ ತಿಂಡಿ ಡಬ್ಬದಲ್ಲಿ ಸ್ಫೋಟಕ ಪತ್ತೆಯಾದ ಘಟನೆಗೆ ಸಂಬಂಧಿಸಿ, ಆರು ಉಗ್ರರನ್ನು ಪೊಲೀಸ್ ಇಲಾಖೆ ಬಂಧಿಸಿತ್ತು. ವಿಚಾರಣೆ ವೇಳೆ ಉಗ್ರರು, ತಿಂಡಿ ಡಬ್ಬಿಯಲ್ಲಿ ಬಾಂಬ್ ಇಟ್ಟು ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಬಗ್ಗೆ ಬಾಯ್ಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸಮುದ್ರ ಮಾರ್ಗದ ಮೂಲಕ ಉಗ್ರರು ನುಸುಳುವ ಸಾಧ್ಯತೆಯನ್ನು ಗಮನದಲ್ಲಿಟ್ಟು, ಕರಾವಳಿ ಜಿಲ್ಲೆ
ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗುಪ್ತಚರ ಇಲಾಖೆಯು ಪೊಲೀಸರು, ಕರಾವಳಿ ಕಾವಲು ಪಡೆ ಹಾಗೂ ಎಲ್ಲ ಭದ್ರತಾ ವಿಭಾಗ
ಗಳಿಗೆ ಸೂಚನೆ ನೀಡಿದೆ. ಅಲ್ಲದೆ, ಪ್ರಮುಖ ಸ್ಥಳಗಳಿಗೂ ಬಿಗಿ ಭದ್ರತೆ ಒದಗಿಸುವಂತೆ ತಿಳಿಸಿದೆ ಎನ್ನಲಾಗಿದೆ.