‘ಬೋರ್ಡ್ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ನ ವಿಭಾಗೀಯ ವಿಶೇಷ ನ್ಯಾಯಪೀಠ ಮಧ್ಯಂತರ ತಡೆ ನೀಡಿದೆ. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು ಇದೇ 27ರಂದು ವಿಚಾರಣೆ ನಡೆಸಲಿದೆ’ ಎಂದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿ ವರಾಳೆ ಅವರು, ‘ಪ್ರಕರಣವನ್ನು ಹೈಕೋರ್ಟ್ನ ವಿಭಾಗೀಯ ವಿಶೇಷ ನ್ಯಾಯಪೀಠ ವಿಚಾರಣೆ ನಡೆಸಿ ಮಧ್ಯಂತರ ಆದೇಶ ನೀಡಿದೆ. ಆ ನ್ಯಾಯಪೀಠದಲ್ಲಿ ನಾನಿಲ್ಲ. ಈಗಾಗಲೇ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ನಿಗದಿಯಾಗಿರುವಾಗ ಇಲ್ಲಿ ಹೇಗೆ ವಿಚಾರಣೆ ನಡೆಸಬೇಕು ಎಂದು ಕೋರುತ್ತೀರಿ. ಇದು ಸರಿಯಾದ ಕ್ರಮವಲ್ಲ. ನೀವು ರಿಜಿಸ್ಟ್ರಿಯನ್ನು ಸಂಪರ್ಕಿಸಿ’ ಎಂದು ಸೂಚಿಸಿತು.