ರಾಜ್ಯ ಚುನಾವಣಾ ಆಯೋಗದ ಪರ ಹಾಜರಾಗಿದ್ದ ಹಿರಿಯ ವಕೀಲ ಕೆ.ಎನ್. ಫಣೀಂದ್ರ, ‘ಜುಲೈ 28ರಂದು ಸಭೆ ನಡೆಸಲಾಗಿದ್ದು, ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ–ಧಾರವಾಡ, ದೊಡ್ಡಬಳ್ಳಾಪುರ, ತರೀಕೆರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಹೇಳಿದರು. ವಿಚಾರಣೆಯನ್ನು ಪೀಠ ಆ.13ಕ್ಕೆ ಮುಂದೂಡಿತು.