ಪ್ರಕರಣವೇನು?: ರಾಯಚೂರಿನಲ್ಲಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಮತ್ತು ಯರಮರಸ್ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ಇಂಧನ ಇಲಾಖೆ ಮತ್ತು ಕಂಪನಿಗಳು ರೈತರ ಜಮೀನು ಸ್ವಾಧೀನಪಡಿಸಿಕೊಂಡಿದ್ದವು. ನಂತರಕಂಪನಿ ರೂಪಿಸಿದ ಸ್ಕೀಂ ಅಡಿ ಯಲ್ಲಿ ಜಮೀನು ನೀಡಿದವರ ಕುಟುಂಬಗಳ ಸದಸ್ಯರಿಗೆ ಅವರ ಅರ್ಹತೆಯ ಆಧಾರದಲ್ಲಿ ಉದ್ಯೋಗ ನೀಡುವುದಾಗಿ ಪ್ರಕಟಿಸಲಾಗಿತ್ತು. ಇದರನ್ವಯ ಅರ್ಜಿದಾರರು2015 ಮತ್ತು 2016ರಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಈ ತನಕ ಅವುಗಳನ್ನು ಪರಿಗಣಿಸಿಲ್ಲ ಎಂದು ಆಕ್ಷೇಪಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಲೇವಾರಿ ಮಾಡಿರುವ ನ್ಯಾಯಪೀಠ, ‘ಕಾನೂನು ಪ್ರಕಾರ ಅರ್ಜಿದಾರರ ಮನವಿಯನ್ನು ಸೂಕ್ತ ರೀತಿಯಲ್ಲಿ ಪರಿಗಣಿಸುವಂತೆ ಆದೇಶಿಸಿದೆ.