ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನರು ಈಗಾಗಲೇ ಹೈರಾಣಾಗಿದ್ದಾರೆ. ಇಂಧನ ಇಲಾಖೆಯ ಅಸಮರ್ಪಕ ನಿರ್ವಹಣೆ ಮತ್ತು ವಿದ್ಯುತ್ ಸೋರಿಕೆ ತಡೆಯುವ ಬದಲಿಗೆ ದರ ಏರಿಸಿ ಬಡವರನ್ನು ಮತ್ತಷ್ಟು ಸುಲಿಗೆ ಮಾಡುವ ಪ್ರಯತ್ನ ಇದು. ವ್ಯಾಪಾರಿ ವರ್ಗದ ಪರವಾಗಿರುವ ಬಿಜೆಪಿ, ಬಡವರು ಮತ್ತು ಮಧ್ಯಮ ವರ್ಗದ ಪಾಲಿಗೆ ರಕ್ತಪಿಪಾಸು ಆಗಿದೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.