ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಶಕ್ತ ರಾಷ್ಟ್ರಗಳು ಇತರರಿಗೆ ನಿರ್ದೇಶನ ನೀಡಬಾರದು’

ಏರೋ ಇಂಡಿಯಾದಲ್ಲಿ ರಕ್ಷಣಾ ಸಚಿವರ ಸಮ್ಮೇಳನ: ಸ್ನೇಹಿ ರಾಷ್ಟ್ರಗಳ ಜತೆ ರಕ್ಷಣಾ ಸಹಭಾಗಿ
Last Updated 14 ಫೆಬ್ರುವರಿ 2023, 20:10 IST
ಅಕ್ಷರ ಗಾತ್ರ

ಬೆಂಗಳೂರು: ’ಮಿಲಿಟರಿ ವಲಯದಲ್ಲಿ ಸಶಕ್ತವಾಗಿರುವ ರಾಷ್ಟ್ರಗಳು ಇತರ ರಾಷ್ಟ್ರಗಳಿಗೆ ನಿರ್ದೇಶನ ನೀಡಬಾರದು’ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದರು.

ಏರೋ ಇಂಡಿಯಾ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ರಕ್ಷಣಾ ಸಚಿವರ ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ಕೆಲವು ರಾಷ್ಟ್ರಗಳು ಶ್ರೀಮಂತವಾಗಿರಬಹುದು ಹಾಗೂ ತಂತ್ರಜ್ಞಾನ ಮತ್ತು ಮಿಲಿಟರಿ ಕ್ಷೇತ್ರದಲ್ಲಿ ಇತರ ರಾಷ್ಟ್ರಗಳಿಗಿಂತ ಅಭಿವೃದ್ಧಿ ಸಾಧಿಸಿರಬಹುದು. ಇಂತಹ ಶಕ್ತಿ ಸಾಮರ್ಥ್ಯಕ್ಕಾಗಿ ಇತರ ರಾಷ್ಟ್ರಗಳಿಗೆ ತಾವು ಸೂಚಿಸಿದ ಪರಿಹಾರವನ್ನು ಅಳವಡಿಸಿಕೊಳ್ಳುವಂತೆ ನಿರ್ದೇಶನ ಮಾಡುವ ಹಕ್ಕು ಇಲ್ಲ’ ಎಂದು ಪ್ರತಿಪಾದಿಸಿದರು.

‘ನೆರವು ಬಯಸುವ ರಾಷ್ಟ್ರಗಳಿಗೆ ಉಪದೇಶ ನೀಡುವ ಪದ್ಧತಿಯಲ್ಲಿ ಭಾರತವು ನಂಬಿಕೆ ಇರಿಸಿಲ್ಲ. ನಾವು ಎಲ್ಲರೊಂದಿಗೆ ಸಾಗಲು ಬಯಸುತ್ತೇವೆ. ನಿಮ್ಮೊಂದಿಗೆ ಅಭಿವೃದ್ಧಿ ಸಾಧಿಸಲು ಬಯಸುತ್ತೇವೆ’ ಎಂದರು.

‘ಒಂದು ರಾಷ್ಟ್ರದಲ್ಲಿ ಕಾಣಿಸಿಕೊಂಡ ಕೋವಿಡ್‌–19, ಇಡೀ ಜಗತ್ತಿನಾದ್ಯಂತ ಪರಿಣಾಮ ಬೀರಿತು. ಹೀಗಾಗಿ, ನಾವೆಲ್ಲರೂ ಒಂದೇ ದೋಣಿಯಲ್ಲಿದ್ದೇವೆ. ಎಲ್ಲರೂ ಒಗ್ಗಟ್ಟಿನಿಂದ ಈಜಬೇಕು ಅಥವಾ ಮುಳುಗಬೇಕಾಗುತ್ತದೆ ಎನ್ನುವುದನ್ನು ಅರಿತುಕೊಳ್ಳಬೇಕು’ ಎಂದು ಹೇಳಿದರು.

‘ಭಯೋತ್ಪಾದನೆಯಂತಹ ಸವಾಲುಗಳನ್ನು ಒಗ್ಗಟ್ಟಿನಿಂದ ಎದುರಿಸಬೇಕು. ಇದಕ್ಕಾಗಿ ಹೊಸ ಕಾರ್ಯತಂತ್ರಗಳನ್ನು ರೂಪಿಸಬೇಕು. ಜಾಗತಿಕ ಭದ್ರತಾ ಸನ್ನಿವೇಶದಲ್ಲಿ ಪರಸ್ಪರ ಸಹಕಾರ ಅಗತ್ಯ’ ಎಂದರು.

27 ರಾಷ್ಟ್ರಗಳ ರಕ್ಷಣಾ ಸಚಿವರು ಸಮ್ಮೇಳನದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT