ಈ ಬಗ್ಗೆ ಬುಧವಾರ ಪ್ರಕಟಣೆ ನೀಡಿರುವ ಅವರು, ‘ಉಕ್ರೇನ್ನಲ್ಲಿ ಭಾರತೀಯ ವೈದ್ಯ ವಿದ್ಯಾರ್ಥಿಗಳು ಶಿಕ್ಷಣವನ್ನು ಮಧ್ಯದಲ್ಲಿಯೇ ತೊರೆದು ವಾಪಸಾಗುವಂತಹ ಸ್ಥಿತಿ ನಿರ್ಮಾಣವಾಗಿರುವುದು ವಿಷಾದನೀಯ. ಆದರೆ, ಅವರ ಮುಂದಿನ ವ್ಯಾಸಂಗಕ್ಕೆ ಯಾವುದೇ ತೊಂದರೆ ಆಗದಂತೆ ಕೇಂದ್ರ ಸರ್ಕಾರವು ಹಲವು ಉಪಕ್ರಮಗಳನ್ನು ಕೈಗೊಳ್ಳುತ್ತಿದೆ. ನಾವು ಪ್ರಧಾನಿ ನರೇಂದ್ರ ಮೋದಿ ಅವರು ಸೂಚಿಸಿರುವಂತೆ ಪ್ರವೇಶ ಒದಗಿಸಲಿದ್ದೇವೆ’ ಎಂದು ಹೇಳಿದ್ದಾರೆ.