ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ಶಾಸಕ ಬಿ.ಎಸ್.ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಪ್ರಭಾಕರ ಕೋರೆ ಅವರ ಪತ್ನಿ ಆಶಾತಾಯಿ, ಸಂಸ್ಥೆಯ ಅಧ್ಯಕ್ಷ, ಶಾಸಕ ಮಹಾಂತೇಶ ಕೌಜಲಗಿ ಸೇರಿದಂತೆ ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಹಲವು ಧುರೀಣರು ವೇದಿಕೆ ಮೇಲಿದ್ದರು. ಪ್ರಭಾಕರ ಕೋರೆ ಅವರ ಬದುಕು– ಸಾಧನೆಗಳ ಗ್ರಂಥ ಲೋಕಾರ್ಪಣೆ ಮಾಡಲಾಯಿತು. ಅಭಿಮಾನಿಗಳು ಅವರಿಗೆ ಪುಸ್ತಕಗಳ ತುಲಾಭಾರ ನೆರವೇರಿಸಿದರು.