<p><strong>ಬೆಂಗಳೂರು: </strong>ಕಲ್ಯಾಣ ಕರ್ನಾಟಕದ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಇದೇ 15ರಂದು ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.</p>.<p>ರಾಜ್ಯ ಸರ್ಕಾರ 1995ರಿಂದ 2015ರವರೆಗಿನ ಎಲ್ಲ ಕನ್ನಡ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಬೇಕು, 371ಜೆ ಜಾರಿಯಾದ ದಿನದಿಂದ ಇಲ್ಲಿಯವರೆಗೆ ಬಳಕೆಯಾಗದೆ ಉಳಿದಿರುವ ನಿಧಿಯನ್ನು ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಏಳಿಗೆಗಾಗಿ ಶೈಕ್ಷಣಿಕ ನಿಧಿಯೆಂದು ಘೋಷಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ ಎಂದು ಕಲ್ಯಾಣ ಕರ್ನಾಟಕದ ವಿಭಾಗೀಯ ಅಧ್ಯಕ್ಷ ಸುನಿಲ್ ಹುಡುಗಿ ಹೇಳಿದರು.</p>.<p>‘ನಮ್ಮ ಬೇಡಿಕೆಗಳಿಗೆ ಸರ್ಕಾರ ಮತ್ತು ಶಿಕ್ಷಣ ಸಚಿವರು ಸ್ಪಂದಿಸದೆ ಮೌನ ತಾಳಿದ್ದಾರೆ. ಹೀಗಾಗಿ, ಎಲ್ಲ ಕನ್ನಡ ಮಾಧ್ಯಮ ಶಾಲೆಗಳನ್ನು ಒಂದು ದಿನ ಸಾಂಕೇತಿಕವಾಗಿ ಬಂದ್ ಮಾಡಲು ತೀರ್ಮಾನಿಸಿದ್ದೇವೆ ಎಂದೂ ಅವರು ತಿಳಿಸಿದರು.</p>.<p>‘ಕಲ್ಯಾಣ ಕರ್ನಾಟಕದ ಇಂಗ್ಲಿಷ್ ಮಾಧ್ಯಮ ಶಾಲೆಗಳು ಪ್ರತಿಭಟನೆಗೆ ಬೆಂಬಲ ನೀಡಿವೆ. ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಸ್ವರೂಪದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಲ್ಯಾಣ ಕರ್ನಾಟಕದ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಇದೇ 15ರಂದು ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.</p>.<p>ರಾಜ್ಯ ಸರ್ಕಾರ 1995ರಿಂದ 2015ರವರೆಗಿನ ಎಲ್ಲ ಕನ್ನಡ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಬೇಕು, 371ಜೆ ಜಾರಿಯಾದ ದಿನದಿಂದ ಇಲ್ಲಿಯವರೆಗೆ ಬಳಕೆಯಾಗದೆ ಉಳಿದಿರುವ ನಿಧಿಯನ್ನು ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಏಳಿಗೆಗಾಗಿ ಶೈಕ್ಷಣಿಕ ನಿಧಿಯೆಂದು ಘೋಷಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ ಎಂದು ಕಲ್ಯಾಣ ಕರ್ನಾಟಕದ ವಿಭಾಗೀಯ ಅಧ್ಯಕ್ಷ ಸುನಿಲ್ ಹುಡುಗಿ ಹೇಳಿದರು.</p>.<p>‘ನಮ್ಮ ಬೇಡಿಕೆಗಳಿಗೆ ಸರ್ಕಾರ ಮತ್ತು ಶಿಕ್ಷಣ ಸಚಿವರು ಸ್ಪಂದಿಸದೆ ಮೌನ ತಾಳಿದ್ದಾರೆ. ಹೀಗಾಗಿ, ಎಲ್ಲ ಕನ್ನಡ ಮಾಧ್ಯಮ ಶಾಲೆಗಳನ್ನು ಒಂದು ದಿನ ಸಾಂಕೇತಿಕವಾಗಿ ಬಂದ್ ಮಾಡಲು ತೀರ್ಮಾನಿಸಿದ್ದೇವೆ ಎಂದೂ ಅವರು ತಿಳಿಸಿದರು.</p>.<p>‘ಕಲ್ಯಾಣ ಕರ್ನಾಟಕದ ಇಂಗ್ಲಿಷ್ ಮಾಧ್ಯಮ ಶಾಲೆಗಳು ಪ್ರತಿಭಟನೆಗೆ ಬೆಂಬಲ ನೀಡಿವೆ. ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಸ್ವರೂಪದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>