ರಾಜ್ಯ ಸರ್ಕಾರ 1995ರಿಂದ 2015ರವರೆಗಿನ ಎಲ್ಲ ಕನ್ನಡ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಬೇಕು, 371ಜೆ ಜಾರಿಯಾದ ದಿನದಿಂದ ಇಲ್ಲಿಯವರೆಗೆ ಬಳಕೆಯಾಗದೆ ಉಳಿದಿರುವ ನಿಧಿಯನ್ನು ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಏಳಿಗೆಗಾಗಿ ಶೈಕ್ಷಣಿಕ ನಿಧಿಯೆಂದು ಘೋಷಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ ಎಂದು ಕಲ್ಯಾಣ ಕರ್ನಾಟಕದ ವಿಭಾಗೀಯ ಅಧ್ಯಕ್ಷ ಸುನಿಲ್ ಹುಡುಗಿ ಹೇಳಿದರು.