ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆಲುವು ಪಡೆದ ಜಿಲ್ಲೆಯ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ‘ಪ್ರಿಯಾಂಕಾ ಗಾಂಧಿಗೆ ಮಗು ಜನಿಸಿದಾಗ ಹುಬ್ಬಳ್ಳಿಯ ದುರ್ಗದ ಬೈಲ್ನಲ್ಲಿ ಕಾಂಗ್ರೆಸ್ ನಾಯಕರು ಸಿಹಿ ವಿತರಣೆ ಮಾಡುತ್ತಿದ್ದರು. ಯಾಕೆ ಸಿಹಿ ಹಂಚುತ್ತಿದ್ದೀರಿ ಎಂದು ಅವರನ್ನು ಕೇಳಿದ್ದಕ್ಕೆ; ನಮ್ಮ ನಾಯಕ ಹುಟ್ಟಿದ್ದಾನೆ ಎಂದರು. ಕುಟುಂಬ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷ ಸೀಮಿತವಾಗಿದ್ದು, ಬಿಜೆಪಿಯಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತ ಕೂಡ ಪ್ರಧಾನಿಯಾಗಬಹುದು. ಕಾಂಗ್ರೆಸ್ನಲ್ಲಿ ಇದು ಸಾಧ್ಯವೇ ಇಲ್ಲ’ ಎಂದರು.