ಇತ್ತೀಚೆಗೆ ಪ್ರತಿಕ್ರಿಯಿಸಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ‘ಮುಂದಿನ ಮೂರು ತಿಂಗಳಲ್ಲಿ ಪಿಎಂ ಕೇರ್ಸ್ ನಿಧಿಯಿಂದ ತೆಗೆದಿರಿಸಿರುವ ಹಣದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ದೇಶದಾದ್ಯಂತ 500 ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಿದೆ’ ಎಂದು ತಿಳಿಸಿದ್ದರು.