‘ಸುಪ್ರೀಂಕೋರ್ಟ್ ಆದೇಶವು ಸಂವಿಧಾನದ ಅಭಿವ್ಯಕ್ತಿ ಮತ್ತು ವಿವೇಚನಾ ಸ್ವಾತಂತ್ರ್ಯವನ್ನು ನಿರಾಕರಿಸುವಂತಿದೆ. ಕೊರೊನಾ ಸಾಂಕ್ರಾಮಿಕ ರೋಗ ಹರಡುತ್ತಿರುವ ಇಂತಹ ಸಂದಿಗ್ಧ ಸನ್ನಿವೇಶದಲ್ಲಿ ನ್ಯಾಯಾಲಯದ ಈ ಆದೇಶ ಜನರಲ್ಲಿ ಆತಂಕ ಹುಟ್ಟಿಸಿದೆ’ ಎಂದು ಯೂನಿಯನ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎ. ಕರುಣಾನಿಧಿ, ಮುಖಂಡರಾದ ಬಿಸಾಟಿ ಮಹೇಶ್, ಕೆ. ಪ್ರಹ್ಲಾದ್, ಕಲ್ಯಾಣಯ್ಯ, ಬಸವರಾಜ ಗುರುವಾರ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.