ಕೇಂದ್ರ ಆರೋಗ್ಯ ಸಚಿವಾಲಯವು ದೆಹಲಿಯ ಏಮ್ಸ್ನ (ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ನರವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರೊ.ಎಂ.ವಿ. ಪದ್ಮಾ ಶ್ರೀವಾಸ್ತವ ಅವರನ್ನು ಪೂರ್ಣಾವಧಿ ನಿರ್ದೇಶಕರನ್ನಾಗಿ ನೇಮಿಸಿತ್ತು. ಅವರು ಅಧಿಕಾರ ವಹಿಸಿಕೊಂಡಿರಲಿಲ್ಲ. ಹೀಗಾಗಿ, ಗುರುರಾಜ್ ಅವರೇ ನಿರ್ದೇಶಕ ಹುದ್ದೆಯಲ್ಲಿ ಮುಂದುವರೆದಿದ್ದರು. ಕೆಲ ದಿನಗಳ ಹಿಂದೆ ಅವರು ನಿವೃತ್ತರಾಗಿದ್ದರಿಂದ ಹಂಗಾಮಿ ನಿರ್ದೇಶಕರ ಸ್ಥಾನಕ್ಕೆ ಡಾ. ಸತೀಶ್ ಚಂದ್ರ ಗಿರಿಮಾಜಿ ಅವರನ್ನು ನೇಮಕ ಮಾಡಲಾಗಿತ್ತು.