<p><strong>ಬೆಂಗಳೂರು</strong>: ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಐವರು ಆರೋಪಿಗಳನ್ನು ಎನ್ಐಎ ವಿಶೇಷ ನ್ಯಾಯಾಲಯ ಇದೇ 23ರವರೆಗೆ ಪೊಲೀಸ್ ವಶಕ್ಕೆ ಒಪ್ಪಿಸಿದೆ.</p>.<p>ಪ್ರಕರಣದ ದಾಖಲೆಗಳು ಮಂಗಳೂರು ಕೋರ್ಟ್ನಿಂದ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಇದೇ 17ರಂದು ವರ್ಗಾವಣೆಯಾಗಿದ್ದು, ಗುರುವಾರ ನ್ಯಾಯಾಧೀಶ ಸಿ.ಎಂ.ಗಂಗಾಧರ ವಿಚಾರಣೆ ನಡೆಸಿದರು. ಈ ವೇಳೆ ಎನ್ಐಎ ಪರ ವಕೀಲ ಪಿ.ಪ್ರಸನ್ನ ಕುಮಾರ್, ’ಆರೋಪಿಗಳನ್ನು ಹೆಚ್ಚಿನ ಪೊಲೀಸ್ ತನಿಖೆಗೆ ಒಳಪಡಿಸಬೇಕಾಗಿದ್ದು ಯುಎಪಿ ಕಾಯ್ದೆ–1967ರ ಕಲಂ 43–ಡಿ ಅಡಿಯಲ್ಲಿ ವಶಕ್ಕೆ ನೀಡಬೇಕು’ ಎಂದು ಕೋರಿದರು.</p>.<p>ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಆರೋಪಿಗಳಾದ ತಂಬಿನ ಮಕ್ಕಿಯ ನೌಫಾಲ್, ನಾವೂರಿನ ಸೈನುಲ್ ಅಬಿದ್, ನಾವೂರಿನ ಮೊಹ ಮದ್ ಶಿಯಾಬ್, ಎಲಿಮಲೆಯ ಅಬ್ದುಲ್ ಬಷೀರ್, ಅಂಕತಡ್ಕದ ರಿಯಾಜ್ ಅವರನ್ನು ಆರು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿ ಆದೇಶಿಸಿತು.</p>.<p>ಜುಲೈ 26ರಂದು ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವ ರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಐವರು ಆರೋಪಿಗಳನ್ನು ಎನ್ಐಎ ವಿಶೇಷ ನ್ಯಾಯಾಲಯ ಇದೇ 23ರವರೆಗೆ ಪೊಲೀಸ್ ವಶಕ್ಕೆ ಒಪ್ಪಿಸಿದೆ.</p>.<p>ಪ್ರಕರಣದ ದಾಖಲೆಗಳು ಮಂಗಳೂರು ಕೋರ್ಟ್ನಿಂದ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಇದೇ 17ರಂದು ವರ್ಗಾವಣೆಯಾಗಿದ್ದು, ಗುರುವಾರ ನ್ಯಾಯಾಧೀಶ ಸಿ.ಎಂ.ಗಂಗಾಧರ ವಿಚಾರಣೆ ನಡೆಸಿದರು. ಈ ವೇಳೆ ಎನ್ಐಎ ಪರ ವಕೀಲ ಪಿ.ಪ್ರಸನ್ನ ಕುಮಾರ್, ’ಆರೋಪಿಗಳನ್ನು ಹೆಚ್ಚಿನ ಪೊಲೀಸ್ ತನಿಖೆಗೆ ಒಳಪಡಿಸಬೇಕಾಗಿದ್ದು ಯುಎಪಿ ಕಾಯ್ದೆ–1967ರ ಕಲಂ 43–ಡಿ ಅಡಿಯಲ್ಲಿ ವಶಕ್ಕೆ ನೀಡಬೇಕು’ ಎಂದು ಕೋರಿದರು.</p>.<p>ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಆರೋಪಿಗಳಾದ ತಂಬಿನ ಮಕ್ಕಿಯ ನೌಫಾಲ್, ನಾವೂರಿನ ಸೈನುಲ್ ಅಬಿದ್, ನಾವೂರಿನ ಮೊಹ ಮದ್ ಶಿಯಾಬ್, ಎಲಿಮಲೆಯ ಅಬ್ದುಲ್ ಬಷೀರ್, ಅಂಕತಡ್ಕದ ರಿಯಾಜ್ ಅವರನ್ನು ಆರು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿ ಆದೇಶಿಸಿತು.</p>.<p>ಜುಲೈ 26ರಂದು ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವ ರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>