<p><strong>ಬೆಂಗಳೂರು</strong>: ‘ರಾಜ್ಯದಲ್ಲಿ ಕೊರೊನಾ ಯೋಧರಾಗಿ ಕೆಲಸ ಮಾಡಿದ್ದ 99 ಪೊಲೀಸರು, ಸೋಂಕು ತಗುಲಿ ಮೃತಪಟ್ಟಿದ್ದಾರೆ. ಅವರೆಲ್ಲರ ಕುಟುಂಬಕ್ಕೆ ಮುಖ್ಯಮಂತ್ರಿ ಕಡೆಯಿಂದ ತಲಾ ₹ 30 ಲಕ್ಷ ಪರಿಹಾರ ಮಂಜೂರಾಗಿದೆ. ಕುಟುಂಬಕ್ಕೆ ಸಿಗಬೇಕಾದ ಅನುಕಂಪದ ಕೆಲಸ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.</p>.<p>ಕೋರಮಂಗಲದಲ್ಲಿರುವ ರಾಜ್ಯ ಮೀಸಲು ಪೊಲೀಸ್ ಪಡೆ (ಕೆಎಸ್ಆರ್ಪಿ) ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಸೇವಾ ಕವಾಯತ್ನಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.</p>.<p>’ಮೃತ ಪೊಲೀಸರ ಅವಲಂಬಿತರಿಗೆ ಕೆಲಸ ನೀಡುವ ವೇಳೆಯಲ್ಲಿ, ಗಂಡ–ಹೆಂಡತಿ ಹಾಗೂ ಮಕ್ಕಳನ್ನು ಮಾತ್ರ ಪರಿಗಣಿಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ಸಹೋದರ ಹಾಗೂ ಸಹೋದರಿ ಸೇರಿ ಕುಟುಂಬದ ಇತರೆ ಸದಸ್ಯರನ್ನೂ ಪರಿಗಣಿಸಲು ನಿಯಮದಲ್ಲಿ ಅವಕಾಶ ಕಲ್ಪಿಸಲಾಗಿದೆ’ ಎಂದರು.</p>.<p>‘ಕೊರೊನಾ ಸೋಂಕು ಇನ್ನೂ ಹೋಗಿಲ್ಲ. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿತ್ಯವೂ ಜಾಗೃತರಾಗಿ ಇರಬೇಕು. ಪರಸ್ಪರ ಅಂತರ ಕಾಯ್ದುಕೊಂಡು, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.’</p>.<p>‘ಪೊಲೀಸರಿಗೆ ಕೊರೊನಾ ಲಸಿಕೆ ನೀಡುವ ಕೆಲಸ ನಡೆದಿದ್ದು, ಇದುವರೆಗೂ ಶೇ 50ರಷ್ಟು ಸಿಬ್ಬಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ವಾಸಕ್ಕೆ ಯೋಗ್ಯವಲ್ಲದ ಶಿಥಿಲಗೊಂಡಿರುವ ವಸತಿಗೃಹಗಳನ್ನು ನೆಲಸಮ ಮಾಡಿ, ಹೊಸ ವಸತಿಗೃಹ ನಿರ್ಮಿಸುವ ಗುರಿ ಇದೆ’ ಎಂದೂ ತಿಳಿಸಿದರು.</p>.<p class="Subhead"><strong>2,600 ಸಿಬ್ಬಂದಿ ಸೇವೆಗೆ ಸೇರ್ಪಡೆ:</strong>‘ಕೆಎಸ್ಆರ್ಪಿಗಾಗಿ ಈಗಾಗಲೇ 2,600 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಅವರೆಲ್ಲರೂ ತರಬೇತಿ ಪಡೆಯುತ್ತಿದ್ದು, ಮುಂದಿನ ಎರಡು ತಿಂಗಳಿನಲ್ಲಿ ಅವರ ಸೇವೆ ಲಭ್ಯವಾಗಲಿದೆ’ ಎಂದು ಪ್ರವೀಣ್ ಸೂದ್ ಹೇಳಿದರು.</p>.<p>‘ವರ್ಷದ ತರಬೇತಿ ಮುಗಿಸಿ ಹಲವು ಅಭ್ಯರ್ಥಿಗಳು, ಕೆಎಸ್ಆರ್ಪಿ, ಡಿಎಆರ್, ಸಿಎಆರ್ ಹಾಗೂ ಇತರೆ ಪಡೆಗಳಲ್ಲಿ ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ಆ ಪೈಕಿ ಹಲವರು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ನಾಗರಿಕ (ಸಿವಿಲ್) ಸೇವೆಗೆ ಆಯ್ಕೆಯಾಗುತ್ತಿದ್ದಾರೆ. ಅಂಥವರಿಗೆ ಪುನಃ ತರಬೇತಿ ನೀಡುವ ಅವಶ್ಯಕತೆ ಇರುವುದಿಲ್ಲ. ಹೀಗಾಗಿ, ಮೂರ್ನಾಲ್ಕು ತಿಂಗಳ ತರಬೇತಿಯನ್ನೂ ಮಾತ್ರ ನೀಡಿ ಸೇವೆಗೆ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ’ ಎಂದೂ ತಿಳಿಸಿದರು.</p>.<p>‘ಪಡೆಯಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿಸುವುದಕ್ಕಾಗಿ ನೇಮಕಾತಿಯಲ್ಲಿ ಮಹಿಳೆಯರಿಗಾಗಿ ಶೇ 25ರಷ್ಟು ಮೀಸಲಾತಿ ನೀಡಲಾಗಿದೆ. ಸಮವಸ್ತ್ರ ಕಿಟ್ಗಾಗಿ ಈ ಬಾರಿ ₹ 45 ಕೋಟಿ ಮೀಸಲಿರಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯದಲ್ಲಿ ಕೊರೊನಾ ಯೋಧರಾಗಿ ಕೆಲಸ ಮಾಡಿದ್ದ 99 ಪೊಲೀಸರು, ಸೋಂಕು ತಗುಲಿ ಮೃತಪಟ್ಟಿದ್ದಾರೆ. ಅವರೆಲ್ಲರ ಕುಟುಂಬಕ್ಕೆ ಮುಖ್ಯಮಂತ್ರಿ ಕಡೆಯಿಂದ ತಲಾ ₹ 30 ಲಕ್ಷ ಪರಿಹಾರ ಮಂಜೂರಾಗಿದೆ. ಕುಟುಂಬಕ್ಕೆ ಸಿಗಬೇಕಾದ ಅನುಕಂಪದ ಕೆಲಸ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.</p>.<p>ಕೋರಮಂಗಲದಲ್ಲಿರುವ ರಾಜ್ಯ ಮೀಸಲು ಪೊಲೀಸ್ ಪಡೆ (ಕೆಎಸ್ಆರ್ಪಿ) ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಸೇವಾ ಕವಾಯತ್ನಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.</p>.<p>’ಮೃತ ಪೊಲೀಸರ ಅವಲಂಬಿತರಿಗೆ ಕೆಲಸ ನೀಡುವ ವೇಳೆಯಲ್ಲಿ, ಗಂಡ–ಹೆಂಡತಿ ಹಾಗೂ ಮಕ್ಕಳನ್ನು ಮಾತ್ರ ಪರಿಗಣಿಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ಸಹೋದರ ಹಾಗೂ ಸಹೋದರಿ ಸೇರಿ ಕುಟುಂಬದ ಇತರೆ ಸದಸ್ಯರನ್ನೂ ಪರಿಗಣಿಸಲು ನಿಯಮದಲ್ಲಿ ಅವಕಾಶ ಕಲ್ಪಿಸಲಾಗಿದೆ’ ಎಂದರು.</p>.<p>‘ಕೊರೊನಾ ಸೋಂಕು ಇನ್ನೂ ಹೋಗಿಲ್ಲ. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿತ್ಯವೂ ಜಾಗೃತರಾಗಿ ಇರಬೇಕು. ಪರಸ್ಪರ ಅಂತರ ಕಾಯ್ದುಕೊಂಡು, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.’</p>.<p>‘ಪೊಲೀಸರಿಗೆ ಕೊರೊನಾ ಲಸಿಕೆ ನೀಡುವ ಕೆಲಸ ನಡೆದಿದ್ದು, ಇದುವರೆಗೂ ಶೇ 50ರಷ್ಟು ಸಿಬ್ಬಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ವಾಸಕ್ಕೆ ಯೋಗ್ಯವಲ್ಲದ ಶಿಥಿಲಗೊಂಡಿರುವ ವಸತಿಗೃಹಗಳನ್ನು ನೆಲಸಮ ಮಾಡಿ, ಹೊಸ ವಸತಿಗೃಹ ನಿರ್ಮಿಸುವ ಗುರಿ ಇದೆ’ ಎಂದೂ ತಿಳಿಸಿದರು.</p>.<p class="Subhead"><strong>2,600 ಸಿಬ್ಬಂದಿ ಸೇವೆಗೆ ಸೇರ್ಪಡೆ:</strong>‘ಕೆಎಸ್ಆರ್ಪಿಗಾಗಿ ಈಗಾಗಲೇ 2,600 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಅವರೆಲ್ಲರೂ ತರಬೇತಿ ಪಡೆಯುತ್ತಿದ್ದು, ಮುಂದಿನ ಎರಡು ತಿಂಗಳಿನಲ್ಲಿ ಅವರ ಸೇವೆ ಲಭ್ಯವಾಗಲಿದೆ’ ಎಂದು ಪ್ರವೀಣ್ ಸೂದ್ ಹೇಳಿದರು.</p>.<p>‘ವರ್ಷದ ತರಬೇತಿ ಮುಗಿಸಿ ಹಲವು ಅಭ್ಯರ್ಥಿಗಳು, ಕೆಎಸ್ಆರ್ಪಿ, ಡಿಎಆರ್, ಸಿಎಆರ್ ಹಾಗೂ ಇತರೆ ಪಡೆಗಳಲ್ಲಿ ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ಆ ಪೈಕಿ ಹಲವರು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ನಾಗರಿಕ (ಸಿವಿಲ್) ಸೇವೆಗೆ ಆಯ್ಕೆಯಾಗುತ್ತಿದ್ದಾರೆ. ಅಂಥವರಿಗೆ ಪುನಃ ತರಬೇತಿ ನೀಡುವ ಅವಶ್ಯಕತೆ ಇರುವುದಿಲ್ಲ. ಹೀಗಾಗಿ, ಮೂರ್ನಾಲ್ಕು ತಿಂಗಳ ತರಬೇತಿಯನ್ನೂ ಮಾತ್ರ ನೀಡಿ ಸೇವೆಗೆ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ’ ಎಂದೂ ತಿಳಿಸಿದರು.</p>.<p>‘ಪಡೆಯಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿಸುವುದಕ್ಕಾಗಿ ನೇಮಕಾತಿಯಲ್ಲಿ ಮಹಿಳೆಯರಿಗಾಗಿ ಶೇ 25ರಷ್ಟು ಮೀಸಲಾತಿ ನೀಡಲಾಗಿದೆ. ಸಮವಸ್ತ್ರ ಕಿಟ್ಗಾಗಿ ಈ ಬಾರಿ ₹ 45 ಕೋಟಿ ಮೀಸಲಿರಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>