<p><strong>ವಿಜಯಪುರ</strong>: ಇಲ್ಲಿನ ಜಿಲ್ಲಾ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ವಿಭಾಗದಲ್ಲಿ ಸಿಸೇರಿಯನ್ (ಶಸ್ತ್ರಚಿಕಿತ್ಸೆ) ಹೆರಿಗೆ ನಂತರ 18 ಬಾಣಂತಿಯರ ಹೊಲಿಗೆ ಬಿಚ್ಚಿಕೊಂಡಿದ್ದು, ನರಳುವಂತಾಗಿದೆ. ಕೆಲವರಿಗೆ ಬಾವು– ಕೀವಾಗಿದ್ದು, ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.</p>.<p>‘ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯ ಹಾಗೂ ತರಬೇತಿ ವೈದ್ಯರಿಂದ ಶಸ್ತ್ರಚಿಕಿತ್ಸೆ ಮಾಡಿಸಿದ ಪರಿಣಾಮ ತೊಂದರೆಯಾಗಿದೆ’ ಎಂದು ಬಾಣಂತಿಯರು ಮತ್ತು ಅವರ ಪೋಷಕರು ಆರೋಪಿಸಿದರು.</p>.<p class="Subhead"><strong>ಸೋಂಕಿನಿಂದ ತೊಂದರೆ:</strong> ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಎಲ್.ಲಕ್ಕಣ್ಣವರ, ಆಸ್ಪತ್ರೆಯಲ್ಲಿ ಒಂದೇ ಶಸ್ತ್ರಚಿಕಿತ್ಸಾ ಕೊಠಡಿ ಇದೆ. ನಿತ್ಯ ಬಿಡುವಿಲ್ಲದೆ ಶಸ್ತ್ರಚಿಕಿತ್ಸೆ ನಡೆಯುತ್ತಿದೆ. 10 ದಿನಗಳ ಹಿಂದೆ ನಡೆದ ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಸೋಂಕು ತಗುಲಿ ಕೆಲವರಿಗೆ ತೊಂದರೆಯಾಗಿದೆ ಎಂದು ತಿಳಿಸಿದರು.</p>.<p>ತೊಂದರೆಗೆ ಒಳಗಾಗಿರುವಬಾಣಂತಿಯರನ್ನು ತಜ್ಞ ವೈದ್ಯರು ಪರೀಕ್ಷೆಗೆ ಒಳಪಡಿಸಿದ್ದಾರೆ. ಅವರಲ್ಲಿ ಅನೇಕ ಬಾಣಂತಿಯರು ರಕ್ತ ಹೀನತೆ (ಅನಿಮಿಕ್), ಹಿಮೊಗ್ಲೊಬಿನ್ ಕೊರತೆಯಿಂದ ಬಳಲುತ್ತಿರುವುದು ದೃಢಪಟ್ಟಿದೆ ಎಂದು ಹೇಳಿದರು.</p>.<p>‘ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. 11 ಬಾಣಂತಿಯರಿಗೆ ಮರುಹೊಲಿಗೆ ಹಾಕಲಾಗಿದೆ. ಇಬ್ಬರು ಬಾಣಂತಿಯರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐವರು ಬಾಣಂತಿಯರಿಗೆ ಸೋಮವಾರ ಮರು ಹೊಲಿಗೆ ಹಾಕಲಾಗುವುದು. ಎಲ್ಲರಿಗೂ ಅಗತ್ಯ ಚಿಕಿತ್ಸೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಹೀಗಾಗದಂತೆ ಕ್ರಮಕೈಗೊಳ್ಳಲಾಗುವುದು‘ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಇಲ್ಲಿನ ಜಿಲ್ಲಾ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ವಿಭಾಗದಲ್ಲಿ ಸಿಸೇರಿಯನ್ (ಶಸ್ತ್ರಚಿಕಿತ್ಸೆ) ಹೆರಿಗೆ ನಂತರ 18 ಬಾಣಂತಿಯರ ಹೊಲಿಗೆ ಬಿಚ್ಚಿಕೊಂಡಿದ್ದು, ನರಳುವಂತಾಗಿದೆ. ಕೆಲವರಿಗೆ ಬಾವು– ಕೀವಾಗಿದ್ದು, ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.</p>.<p>‘ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯ ಹಾಗೂ ತರಬೇತಿ ವೈದ್ಯರಿಂದ ಶಸ್ತ್ರಚಿಕಿತ್ಸೆ ಮಾಡಿಸಿದ ಪರಿಣಾಮ ತೊಂದರೆಯಾಗಿದೆ’ ಎಂದು ಬಾಣಂತಿಯರು ಮತ್ತು ಅವರ ಪೋಷಕರು ಆರೋಪಿಸಿದರು.</p>.<p class="Subhead"><strong>ಸೋಂಕಿನಿಂದ ತೊಂದರೆ:</strong> ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಎಲ್.ಲಕ್ಕಣ್ಣವರ, ಆಸ್ಪತ್ರೆಯಲ್ಲಿ ಒಂದೇ ಶಸ್ತ್ರಚಿಕಿತ್ಸಾ ಕೊಠಡಿ ಇದೆ. ನಿತ್ಯ ಬಿಡುವಿಲ್ಲದೆ ಶಸ್ತ್ರಚಿಕಿತ್ಸೆ ನಡೆಯುತ್ತಿದೆ. 10 ದಿನಗಳ ಹಿಂದೆ ನಡೆದ ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಸೋಂಕು ತಗುಲಿ ಕೆಲವರಿಗೆ ತೊಂದರೆಯಾಗಿದೆ ಎಂದು ತಿಳಿಸಿದರು.</p>.<p>ತೊಂದರೆಗೆ ಒಳಗಾಗಿರುವಬಾಣಂತಿಯರನ್ನು ತಜ್ಞ ವೈದ್ಯರು ಪರೀಕ್ಷೆಗೆ ಒಳಪಡಿಸಿದ್ದಾರೆ. ಅವರಲ್ಲಿ ಅನೇಕ ಬಾಣಂತಿಯರು ರಕ್ತ ಹೀನತೆ (ಅನಿಮಿಕ್), ಹಿಮೊಗ್ಲೊಬಿನ್ ಕೊರತೆಯಿಂದ ಬಳಲುತ್ತಿರುವುದು ದೃಢಪಟ್ಟಿದೆ ಎಂದು ಹೇಳಿದರು.</p>.<p>‘ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. 11 ಬಾಣಂತಿಯರಿಗೆ ಮರುಹೊಲಿಗೆ ಹಾಕಲಾಗಿದೆ. ಇಬ್ಬರು ಬಾಣಂತಿಯರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐವರು ಬಾಣಂತಿಯರಿಗೆ ಸೋಮವಾರ ಮರು ಹೊಲಿಗೆ ಹಾಕಲಾಗುವುದು. ಎಲ್ಲರಿಗೂ ಅಗತ್ಯ ಚಿಕಿತ್ಸೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಹೀಗಾಗದಂತೆ ಕ್ರಮಕೈಗೊಳ್ಳಲಾಗುವುದು‘ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>