ನಗರದಲ್ಲಿ ಜನವರಿ 8ರಂದು ಶ್ರೀರಾಮ ಸೇನೆಯಿಂದ ವಿರಾಟ್ ಹಿಂದೂ ಸಮಾವೇಶದ ಸಿದ್ಧತೆ ಮಾಡಲಾಗಿದೆ. ಇದರ ನೇತೃತ್ವ ವಹಿಸಿದ ರವಿ ಹಾಗೂ ಅವರ ಸಹವರ್ತಿ ಮನೋಜ್ ಸೇರಿಕೊಂಡು ರಾತ್ರಿ 8ರ ಸುಮಾರಿಗೆ ಕಾರಿನಲ್ಲಿ ಸ್ಥಳಕ್ಕೆ ಹೊರಟಿದ್ದರು. ಕಾರು ಹಿಂಡಲಗಾದ ಮರಾಠಿ ಸರ್ಕಾರಿ ಶಾಲೆಯ ಬಳಿ ಬಂದಾಗ, ಅಲ್ಲೇ ಕಾಯುತ್ತ ನಿಂತಿದ್ದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದರು.