ಬೆಂಗಳೂರು: ಬೆಂಗಳೂರು ದಕ್ಷಿಣ ಕಮಿಷನರೇಟ್ನ ಕೇಂದ್ರ ಸರಕು ಮತ್ತು ಸೇವಾ ತೆರಿಗೆ ವಿಭಾಗದ ಸೂಪರಿಂಟೆಂಡೆಂಟ್ ಮಹೇಶ್ ಕುಮಾರ್ ಅವರು ಈ ಸಾಲಿನ ಗಣರಾಜ್ಯೋತ್ಸವ ರಾಷ್ಟ್ರಪತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಇವರು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದವರು. ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಿಂದ ಎಂಎಸ್ಸಿ (ತೋಟಗಾರಿಕೆ) ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಕೇಂದ್ರ ಅಬಕಾರಿ ಇಲಾಖೆಯ ಇನ್ಸ್ಪೆಕ್ಟರ್ ಆಗಿ 1994ರಲ್ಲಿ ಸೇವೆ ಆರಂಭಿಸಿದ್ದ ಇವರು, 2007ರಲ್ಲಿ ಸೂಪರಿಂಟೆಂಡೆಂಟ್ ಆಗಿ ಬಡ್ತಿ ಹೊಂದಿದ್ದರು.