ಬೆಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಎರಡು ದಿನಗಳ ಪ್ರವಾಸಕ್ಕಾಗಿ ಜೂನ್ 13 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಜೂನ್ 13 ರಂದು ಬೆಳಿಗ್ಗೆ ಬೆಂಗಳೂರಿಗೆ ಆಗಮಿಸುವ ರಾಷ್ಟ್ರಪತಿ, ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ಆ ದಿನ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡುವರು.
ಇಸ್ಕಾನ್ ಸಂಸ್ಥೆಯು ಕನಕಪುರ ರಸ್ತೆ ಸಮೀಪದ ದೊಡ್ಡಕಲ್ಲಸಂದ್ರದ ವೈಕುಂಠ ಬೆಟ್ಟದಲ್ಲಿ ತಿರುಪತಿ ತಿರುಮಲ ಮಾದರಿಯಲ್ಲಿ ನಿರ್ಮಿಸಿರುವ ದೇಗುಲವನ್ನು ಜೂನ್ 14 ರಂದು ಬೆಳಿಗ್ಗೆ ಉದ್ಘಾಟಿಸುವರು. ಆ ದಿನ ಮಧ್ಯಾಹ್ನ ದೆಹಲಿಗೆ ವಾಪಸಾಗುವರು.