ಭಾನುವಾರ, ಮಾರ್ಚ್ 26, 2023
21 °C

ರಾಷ್ಟ್ರಪತಿ ಚುನಾವಣೆ ಬ್ಯಾಲೆಟ್ ಜರ್ನಿ: ಜುಲೈ 18ರಂದು ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇದೇ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಹಿನ್ನಲೆಯಲ್ಲಿ ಮತದಾನದ ಅವಶ್ಯಕ ಸಾಮಾಗ್ರಿಗಳು ಹಾಗೂ ಬ್ಯಾಲೆಟ್ ಬಾಕ್ಸ್ ಗಳನ್ನು ಮಂಗಳವಾರ ನವದೆಹಲಿಯ ಭಾರತ ಚುನಾವಣಾ ಆಯೋಗದ ಕೇಂದ್ರ ಕಚೇರಿಯಿಂದ ಆಯಾ ರಾಜ್ಯಗಳಿಗೆ ರವಾನಿಸಲಾಯಿತು.

ಕರ್ನಾಟಕದ ‘ಬ್ಯಾಲೆಟ್ ಜರ್ನಿ’ಯ ನೇತೃತ್ವವನ್ನು ರಾಜ್ಯ ಜಂಟಿ ಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ ಅವರು ವಹಿಸಿದ್ದು, ಮಂಗಳವಾರ ಸಂಜೆ ನವದೆಹಲಿಯಿಂದ ಹೊರಟು ರಾತ್ರಿ 8:15 ಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿತು.

ಈ ವಿಶೇಷ ‘ಬ್ಯಾಲೆಟ್ ಜರ್ನಿ’ಯ ಮೂಲಕ ರಾಜ್ಯಕ್ಕೆ ತರಲಾದ ಮತದಾನದ ಸಾಮಾಗ್ರಿಗಳನ್ನು ವಿಧಾನಸೌಧದ ಇದಕ್ಕಾಗಿ ಮೀಸಲಿಟ್ಟಿರುವ ಕೊಠಡಿ ಸಂಖ್ಯೆ 108 ರಲ್ಲಿ (Strong Room) ಶೇಖರಿಸಿಡಲಾಯಿತು. ರಾಜ್ಯ ಮುಖ್ಯಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ಸಹಾಯಕ ಚುನಾವಣಾಧಿಕಾರಿ ಶ್ರೀಮತಿ ವಿಶಾಲಾಕ್ಷಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸ್ಟ್ರಾಂಗ್ ರೂಂ ಲಾಕ್‌ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು