ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎಚ್.ಡಿ.ರೇವಪ್ಪ,‘ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ವೇತನ ಹೆಚ್ಚಳ ಹಾಗೂ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಏಪ್ರಿಲ್ನಲ್ಲಿ ಮುಷ್ಕರ ನಡೆಸಿದ್ದರು. ಇದಕ್ಕಾಗಿ ನಾಲ್ಕೂ ಸಾರಿಗೆ ನಿಗಮಗಳಲ್ಲಿ ಸಾವಿರಾರು ಕಾರ್ಮಿಕರನ್ನು ವಜಾಗೊಳಿಸಲಾಗಿದ್ದು, ವರ್ಗಾವಣೆ ಹಾಗೂ ಅಮಾನತು ಶಿಕ್ಷೆಗಳನ್ನು ನೀಡಲಾಗಿದೆ’ ಎಂದು ದೂರಿದರು.