‘ಮುಜರಾಯಿ ದೇವಸ್ಥಾನಗಳಲ್ಲಿ ಸಹಾಯಕ ಅರ್ಚಕರ ಪರಿಚಾರಕರ ಹುದ್ದೆ, ಸ್ಥಾನಿಕರು, ಅಡುಗೆಯವರು, ಒಳಾಂಗಣ ನೌಕರರು, ಮಂಗಳವಾದ್ಯ ನುಡಿಸುವವರ ಹುದ್ದೆಗಳು ಅನೇಕ ವರ್ಷಗಳಿಂದ ಖಾಲಿ ಇವೆ. ಇದರಿಂದ ದೇವಸ್ಥಾನದ ಕೆಲಸ ಕಾರ್ಯಗಳಿಗೆ ತೊಂದರೆಯಾಗಿದೆ. ಕೂಡಲೇ ಆ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದು ಒಕ್ಕೂಟದ ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್. ದೀಕ್ಷಿತ್ ಅವರು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.