ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಸ್ಥಾನಗಳಲ್ಲಿ ಮೊಬೈಲ್‌ ನಿಷೇಧಿಸುವಂತೆ ಸಚಿವರಿಗೆ ಮನವಿ

Last Updated 17 ಡಿಸೆಂಬರ್ 2022, 15:34 IST
ಅಕ್ಷರ ಗಾತ್ರ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಾಲಯಗಳಲ್ಲಿ ಮೊಬೈಲ್‌ ಬಳಕೆ ನಿಷೇಧಿಸುವಂತೆ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ–ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟವು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಮನವಿ ಸಲ್ಲಿಸಿದೆ.

ಒಕ್ಕೂಟದ ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್‌.ಎನ್‌. ದೀಕ್ಷಿತ್‌ ಅವರು ಸಚಿವರನ್ನು ಶನಿವಾರ ಭೇಟಿಮಾಡಿ ಮನವಿ ಸಲ್ಲಿಸಿದರು. ದೇವಸ್ಥಾನಗಳ ಆವರಣದಲ್ಲಿ ಮೊಬೈಲ್‌ ಬಳಕೆಗೆ ಅವಕಾಶ ಇರುವುದರಿಂದ ಪೂಜಾ ಕೆಲಸಗಳು ಹಾಗೂ ಭಕ್ತಾದಿಗಳಿಗೆ ತೊಂದರೆ ಆಗುತ್ತಿದೆ. ಆದ್ದರಿಂದ ದೇವಸ್ಥಾನಗಳ ಆವರಣಗಳಲ್ಲಿ ಮೊಬೈಲ್‌ ಬಳಕೆ ನಿಷೇಧಿಸಿ ಆದೇಶ ಹೊರಡಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.

‘ಪೂಜೆಯ ನಡುವೆಯೇ ರಿಂಗ್‌ ಟೋನ್‌ಗಳ ಶಬ್ಧದಿಂದ ಕಿರಿಕಿರಿ ಉಂಟಾಗುತ್ತಿದೆ. ಫೋಟೊ ತೆಗೆಯುವುದು, ಗರ್ಭಗುಡಿಗೆ ಬೆನ್ನುಹಾಕಿ ಸೆಲ್ಫಿ ತೆಗೆಯುತ್ತಾರೆ. ಇದರಿಂದ ಏಕಾಗ್ರತೆಗೆ ಭಂಗ ಉಂಟಾಗುತ್ತಿದೆ. ಈ ರೀತಿ ಮೊಬೈಲ್‌ ಬಳಕೆಗೆ ಅವಕಾಶ ಕಲ್ಪಿಸುವುದರಿಂದ ಭಕ್ತಿಯಿಂದ ದೇವಸ್ಥಾನಕ್ಕೆ ಬರುವವರಲ್ಲಿ ತಪ್ಪು ಕಲ್ಪನೆ ಮೂಡುವ ಸಾಧ್ಯತೆ ಇದೆ. ದೇವಸ್ಥಾನಗಳಲ್ಲಿ ಮೊಬೈಲ್‌ ಬಳಕೆ ನಿಷೇಧಿಸುವುದರ ಜತೆಗೆ, ಸಾರ್ವಜನಿಕರು ಮೊಬೈಲ್‌ ಇರಿಸಿ ಒಳಕ್ಕೆ ಬರಲು ಸೂಕ್ತ ವ್ಯವಸ್ಥೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT