ಈ ಕುರಿತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿರುವ ಒಕ್ಕೂಟದ ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್. ದೀಕ್ಷಿತ್, ‘ಲಾಕ್ಡೌನ್ನಿಂದ ಅರ್ಚಕರು ಮತ್ತು ದೇವಸ್ಥಾನದ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಯಾ ದೇವಸ್ಥಾನಗಳ ಖಾತೆಯಲ್ಲಿರುವ ಹಣವನ್ನು ಬಳಸಿಕೊಂಡು ನೆರವು ನೀಡಬೇಕು’ ಎಂದು ಆಗ್ರಹಿಸಿದ್ದಾರೆ.