ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ಬರುತ್ತಿರುವುದು ಮರೆಯಲಾಗದ ಕ್ಷಣ: ಬಿಎಸ್‌ವೈ

Last Updated 26 ಫೆಬ್ರುವರಿ 2023, 12:50 IST
ಅಕ್ಷರ ಗಾತ್ರ

ಶಿವಮೊಗ್ಗ: ‘ನನ್ನ ಹುಟ್ಟು ಹಬ್ಬದ ದಿನವೇ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿರುವುದು ‌ಜೀವನದಲ್ಲಿಯೇ ಮರೆಯಲಾಗದ ಕ್ಷಣ. ನನಗೆ ಸಮಾಧಾನ, ತೃಪ್ತಿ ತಂದಿದೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಭಾನುವಾರ ಇಲ್ಲಿ ಸುದ್ದಿಗಾರರ ಎದುರು ಭಾವುಕರಾದರು.

‘ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಲಕ್ಷಾಂತರ ಜನ ಬರಬೇಕು ಎಂದು ವಿನಂತಿ ಮಾಡುತ್ತೇನೆ. ನಾವ್ಯಾರೂ ಇಷ್ಟು ಕಡಿಮೆ ವೆಚ್ವದಲ್ಲಿ ಏರ್‌ಪೋರ್ಟ್ ಮಾಡಿ ಮುಗಿಸಬಹುದು ಎಂದು ನಿರೀಕ್ಷೆ ಮಾಡಿರಲಿಲ್ಲ. ಕನಸು ಮನಸ್ಸಿನಲ್ಲೂ ಯೋಚನೆ ಮಾಡಿರಲಿಲ್ಲ’ ಎಂದರು.

‘ಈಗಾಗಲೇ ತೀರ್ಮಾನ ಮಾಡಿದ್ದೇನೆ‌. ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಬಿಜೆಪಿ ಪುನಃ ಆಡಳಿತಕ್ಕೆ ಬರುವುದು ಅಷ್ಟೇ ಸತ್ಯ’ ಎಂದು ಯಡಿಯೂರಪ್ಪ ಹೇಳಿದರು.

‘ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮನಸ್ಸಲ್ಲಿ ಯಾರಿಗೂ ಬಹುಮತ ಬರಬಾರದು ಎಂಬುದಿದೆ. ಆ ತರಹ ಆಗುವುದಿಲ್ಲ. ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT