ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ಸ್ಯ ಉತ್ಪನ್ನಗಳ ರಫ್ತು ಹೆಚ್ಚಳಕ್ಕೆ ಆದ್ಯತೆ: ಕೇಂದ್ರ ಸಚಿವ ಮುರುಗನ್

Last Updated 17 ಅಕ್ಟೋಬರ್ 2021, 7:48 IST
ಅಕ್ಷರ ಗಾತ್ರ

ಮಂಗಳೂರು: ಮೀನುಗಾರಿಕೆಗೆ ಉತ್ತೇಜನ ನೀಡುವ ಮೂಲಕ ಮೀನುಗಾರರ ಆರ್ಥಿಕ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಮತ್ಸ್ಯೋತ್ಪನ್ನಗಳ ರಫ್ತು ಹೆಚ್ಚಳಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಕೇಂದ್ರ ಮೀನುಗಾರಿಕೆ ರಾಜ್ಯ ಸಚಿವ ಮುರುಗನ್ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ‌ ಸರ್ಕಾರ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಆರಂಭಿಸಿದೆ.‌ ಇದರಡಿ ಮೀನುಗಾರಿಕೆ, ಬಂದರು, ಸಂಸ್ಕರಣೆ, ಶೀತಲೀಕರಣ ಘಟಕಗಳ ಅಭಿವೃದ್ಧಿ ಮಾಡುವ ಮೂಲಕ ಮೀನಿನ ಉತ್ಪನ್ನಗಳ‌ ರಫ್ತು ಹೆಚ್ಚಿಸಲಾಗುವುದು ಎಂದರು.

ಸಮುದ್ರ ಕಳೆ‌: ಸಮುದ್ರ ಕಳೆ (ಸೀ ವೀಡ್) ಬೆಳೆಯುವ ಮೂಲಕ ಮೀನುಗಾರ ಮಹಿಳೆಯರಿಗೂ ಆರ್ಥಿಕ ಸ್ವಾವಲಂಬನೆ ನೀಡಲಾಗುವುದು. ಔಷಧಿ, ಆಹಾರ‌ ಸಂಸ್ಕರಣೆ, ರಸಗೊಬ್ಬರಗಳಲ್ಲಿ ಸಮುದ್ರ ಕಳೆ ಬಳಕೆ ಆಗುತ್ತಿದ್ದು, ಬೇಡಿಕೆ ಹೆಚ್ಚಾಗಿದೆ ಎಂದು ತಿಳಿಸಿದರು.

ಈಗಾಗಲ ಕೊಚ್ಚಿನದ ನಲ್ಲಿ ವಿಶೇಷ ಆರ್ಥಿಕ ವಲಯದಲ್ಲಿ ಸೀವೀಡ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಅನುಮೋದನೆ ದೊರೆತ ತಕ್ಷಣ ಕೆಲಸ‌ ಆರಂಭವಾಗಲಿದೆ ಎಂದರು.

ದೇಶದಲ್ಲಿ 5 ಆಧುನಿಕ ಮೀನುಗಾರಿಕೆ ಬಂದರು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.‌ ಒಳನಾಡು, ಸಮುದ್ರ ಮೀನುಗಾರಿಕೆ ಅಭಿವೃದ್ಧಿಗೆ‌ ಆದ್ಯತೆ ನೀಡಲಾಗುವುದು ಎಂದರು.

ರಾಜ್ಯದ ಮೀನುಗಾರಿಕೆ‌ ಸಚಿವ ಎಸ್. ಅಂಗಾರ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳ‌ ನೆರವಿನಿಂದ ರಾಜ್ಯದಲ್ಲಿ ಮೀನುಗಾರಿಕೆ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT