ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ಅಡಿ ವಿದ್ಯುತ್ ವಿತರಿಸುವ ಐದು ಎಸ್ಕಾಂಗಳ ಪೈಕಿ, ಮೂರನ್ನು ಖಾಸಗಿಯವರ ನಿರ್ವಹಣೆಗೆ ಕೊಡುವಂತೆ ಕೇಂದ್ರದ ಪ್ರಸ್ತಾವದಲ್ಲಿತ್ತು. ಕೋವಿಡ್ನಿಂದ ಆರ್ಥಿಕ ವ್ಯವಸ್ಥೆಗೆ ಹಿನ್ನಡೆ ಉಂಟಾಗಿರುವುದರಿಂದ ಈ ಸುಧಾರಣಾ ಕ್ರಮ ಕೈಗೊಳ್ಳಬೇಕಾಗಿದ್ದು, ಪ್ರತಿಕ್ರಿಯೆ ನೀಡುವಂತೆ ಸೆ. 20ರಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ವಿದ್ಯುತ್ ಸಚಿವಾಲಯ ಪ್ರಸ್ತಾವ ಸಲ್ಲಿಸಿತ್ತು.