ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ‘ಮೂರು ತಿಂಗಳಿಂದ ಸರ್ಕಾರಕ್ಕೆ ನಮ್ಮ ಬೇಡಿಕೆ ಈಡೇರಿಸುವಂತೆ ಮನವಿ ಮಾಡುತ್ತಿದ್ದೇವೆ. ನಮ್ಮ ಮನವಿಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸಿಲ್ಲ. ಒಕ್ಕೂಟದ ಕಾರ್ಯಕರ್ತರ 15 ಬೇಡಿಕೆಗಳಲ್ಲಿ ಎರಡು ಬೇಡಿಕೆಗಳನ್ನು ಮಾತ್ರ ಸರ್ಕಾರ ಈಡೇರಿಸಿದೆ. ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಸುತ್ತೋಲೆಗಳನ್ನು ಮರು ಪರಿಶೀಲಿಸಬೇಕು. ಕೊರೊನಾ ನಂತರದಲ್ಲಿ ಶಾಲೆಗಳು ಆರಂಭಗೊಂಡಿದ್ದು, ತಕ್ಷಣ ಶೈಕ್ಷಣಿಕ ಕ್ಯಾಲೆಂಡರ್ ಹಾಗೂ ಪಠ್ಯಪುಸ್ತಕವನ್ನು ನಿಗದಿಗೊಳಿಸಿ ಬಿಡುಗಡೆ ಮಾಡಬೇಕು. ಖಾಸಗಿ ಶಾಲೆಗಳ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಬೇಕು' ಎಂದು ಒತ್ತಾಯಿಸಿದರು.