<p><strong>ಬೆಂಗಳೂರು:</strong> ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬುಧವಾರ (ಜ. 6) ನಗರದ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ‘ಮಾನ್ಯತೆ ಪಡೆದ ಖಾಸಗಿ ಅನುದಾನರಹಿತ ಶಾಲೆಗಳ ಒಕ್ಕೂಟ’ (ರುಪ್ಸಾ) ನಿರ್ಧರಿಸಿದೆ.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ‘ರಾಜ್ಯದ 30 ಜಿಲ್ಲೆಗಳಿಂದ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಸೇರಿ 8 ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅಂದು ಬೆಳಿಗ್ಗೆ 10 ಗಂಟೆಗೆ ಮೌರ್ಯ ವೃತ್ತದಿಂದ ರ್ಯಾಲಿ ಹೊರಡಲಿದೆ’ ಎಂದರು.</p>.<p>‘ಪ್ರತಿಭಟನೆ ನಡೆಯುವ ದಿನ ಆಫ್ಲೈನ್ - ಆನ್ಲೈನ್ ಕ್ಲಾಸ್ಗಳು ಎಂದಿನಂತೆ ನಡೆಯಲಿವೆ. ತರಗತಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರತಿ ಶಾಲೆಯಿಂದ ಒಬ್ಬರು ಅಥವಾ ಇಬ್ಬರು ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದೂ ಹೇಳಿದರು.</p>.<p>‘ಮೂರು ತಿಂಗಳಿಂದ ಸರ್ಕಾರಕ್ಕೆ ನಮ್ಮ ಬೇಡಿಕೆ ಈಡೇರಿಸುವಂತೆ ಮನವಿ ಕೊಟ್ಟಿದ್ದೆವು. ಆದರೆ ಸರ್ಕಾರ ಸ್ಪಂದಿಸುತ್ತಿಲ್ಲ. 15 ಬೇಡಿಕೆಗಳಲ್ಲಿ ಎರಡು ಬೇಡಿಕೆಗಳನ್ನು ಮಾತ್ರ ಸರ್ಕಾರ ಈಡೇರಿಸಿದೆ. ಉಳಿದ 13 ಬೇಡಿಕೆಗಳು ಹಾಗೇ ಉಳಿದಿವೆ’ ಎಂದು ಸರ್ಕಾರದ ನಡೆಗೆ ಅವರು ಬೇಸರ ವ್ಯಕ್ತಪಡಿಸಿದರು.</p>.<p>‘ರುಪ್ಸಾ ಅಡಿಯಲ್ಲಿ ನೋಂದಣಿಗೊಂಡಿರುವ ಶಾಲೆಗಳ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 12,998 ಶಾಲೆಗಳು ಅಧಿಕೃತವಾಗಿ ರುಪ್ಸಾ ಶಾಲಾ ಒಕ್ಕೂಟದಲ್ಲಿ ನೊಂದಣಿ ಆಗಿವೆ. ಒಕ್ಕೂಟದ ವೆಬ್ಸೈಟ್ನಲ್ಲಿ ನೊಂದಾಯಿತ ಶಾಲೆಗಳ ಬಗ್ಗೆ ಮಾಹಿತಿ ಲಭ್ಯವಿದೆ’ ಎಂದರು.</p>.<p>‘ಇದು ಸಾಂಕೇತಿಕ ಪ್ರತಿಭಟನೆಯಾಗಿದ್ದು, ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಉಗ್ರ ಹೋರಾಟ ಮಾಡಲಾಗುವುದು. 'ಶಿಕ್ಷಣ ಮಂತ್ರಿಗಳೇ ತೊಲಗಿ' ಎಂದೂ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು. ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಅಥವಾ ಸರ್ಕಾರ ಅವರನ್ನು ಇಲಾಖೆಯಿಂದ ಬದಲಾಯಿಸಬೇಕು’ ಎಂದೂ ಆಗ್ರಹಿಸಿದರು.</p>.<p>‘6 ರಂದು ನಡೆಯುವ ಪ್ರತಿಭಟನೆಗೆ ಅನೇಕ ಸಂಘಟನೆಗಳು ಬೆಂಬಲ ನೀಡಿವೆ. ಶಿಕ್ಷಕರು ಮತ್ತು ಆಡಳಿತ ವರ್ಗ, ಅಲ್ಪಸಂಖ್ಯಾತರ ಅಸೋಸಿಯೇಷನ್, ಟೀಚರ್ಸ್ ಅಂಡ್ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಮುಂತಾದ ಸಂಘಟನೆಗಳು ಬೆಂಬಲ ನೀಡಿವೆ’ ಎಂದೂ ಹೇಳಿದರು.</p>.<p><strong>‘ರುಪ್ಸಾ’ದ ಬೇಡಿಕೆಗಳು: </strong>ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳ ಶಿಕ್ಷಕರಿಗೆ ಪರಿಹಾರ ನೀಡಲು ಕನಿಷ್ಠ ಒಂದು ಸಾವಿರ ಕೋಟಿಯ ಪ್ಯಾಕೇಜ್ ಘೋಷಿಸಬೇಕು, ಸಂಬಳ ಇಲ್ಲದ ಶಿಕ್ಷಕರಿಗೆ ಪ್ರತಿ ತಿಂಗಳ ₹ 10 ಸಾವಿರ ನೀಡಬೇಕು, 1985ರಿಂದ ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು, 2020ರ ನ. 11ರಂದು ಹೊರಡಿಸಿರುವ ಸುತ್ತೋಲೆಯನ್ನು ಸರ್ಕಾರ ಮರು ಪರಿಶೀಲಿಸಬೇಕು, ಶಾಲೆಗಳ ಮಾನ್ಯತೆ ನವೀಕರಣವನ್ನು ಅದಾಲತ್ ರೂಪದಲ್ಲಿ ವಿಲೇವಾರಿ ಮಾಡಬೇಕು, ಗಡಿಭಾಗದ ಶಾಲೆಗಳ ಮುಚ್ಚುವ ನಿರ್ಧಾರ ಹಿಂಪಡೆಯಬೇಕು, 2020-21 ನೇ ಸಾಲಿನ ಆರ್ಟಿಇ ಹಣ ಒಂದೇ ಕಂತಿನಲ್ಲಿ ಮರು ಪಾವತಿ ಮಾಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬುಧವಾರ (ಜ. 6) ನಗರದ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ‘ಮಾನ್ಯತೆ ಪಡೆದ ಖಾಸಗಿ ಅನುದಾನರಹಿತ ಶಾಲೆಗಳ ಒಕ್ಕೂಟ’ (ರುಪ್ಸಾ) ನಿರ್ಧರಿಸಿದೆ.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ‘ರಾಜ್ಯದ 30 ಜಿಲ್ಲೆಗಳಿಂದ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಸೇರಿ 8 ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅಂದು ಬೆಳಿಗ್ಗೆ 10 ಗಂಟೆಗೆ ಮೌರ್ಯ ವೃತ್ತದಿಂದ ರ್ಯಾಲಿ ಹೊರಡಲಿದೆ’ ಎಂದರು.</p>.<p>‘ಪ್ರತಿಭಟನೆ ನಡೆಯುವ ದಿನ ಆಫ್ಲೈನ್ - ಆನ್ಲೈನ್ ಕ್ಲಾಸ್ಗಳು ಎಂದಿನಂತೆ ನಡೆಯಲಿವೆ. ತರಗತಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರತಿ ಶಾಲೆಯಿಂದ ಒಬ್ಬರು ಅಥವಾ ಇಬ್ಬರು ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದೂ ಹೇಳಿದರು.</p>.<p>‘ಮೂರು ತಿಂಗಳಿಂದ ಸರ್ಕಾರಕ್ಕೆ ನಮ್ಮ ಬೇಡಿಕೆ ಈಡೇರಿಸುವಂತೆ ಮನವಿ ಕೊಟ್ಟಿದ್ದೆವು. ಆದರೆ ಸರ್ಕಾರ ಸ್ಪಂದಿಸುತ್ತಿಲ್ಲ. 15 ಬೇಡಿಕೆಗಳಲ್ಲಿ ಎರಡು ಬೇಡಿಕೆಗಳನ್ನು ಮಾತ್ರ ಸರ್ಕಾರ ಈಡೇರಿಸಿದೆ. ಉಳಿದ 13 ಬೇಡಿಕೆಗಳು ಹಾಗೇ ಉಳಿದಿವೆ’ ಎಂದು ಸರ್ಕಾರದ ನಡೆಗೆ ಅವರು ಬೇಸರ ವ್ಯಕ್ತಪಡಿಸಿದರು.</p>.<p>‘ರುಪ್ಸಾ ಅಡಿಯಲ್ಲಿ ನೋಂದಣಿಗೊಂಡಿರುವ ಶಾಲೆಗಳ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 12,998 ಶಾಲೆಗಳು ಅಧಿಕೃತವಾಗಿ ರುಪ್ಸಾ ಶಾಲಾ ಒಕ್ಕೂಟದಲ್ಲಿ ನೊಂದಣಿ ಆಗಿವೆ. ಒಕ್ಕೂಟದ ವೆಬ್ಸೈಟ್ನಲ್ಲಿ ನೊಂದಾಯಿತ ಶಾಲೆಗಳ ಬಗ್ಗೆ ಮಾಹಿತಿ ಲಭ್ಯವಿದೆ’ ಎಂದರು.</p>.<p>‘ಇದು ಸಾಂಕೇತಿಕ ಪ್ರತಿಭಟನೆಯಾಗಿದ್ದು, ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಉಗ್ರ ಹೋರಾಟ ಮಾಡಲಾಗುವುದು. 'ಶಿಕ್ಷಣ ಮಂತ್ರಿಗಳೇ ತೊಲಗಿ' ಎಂದೂ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು. ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಅಥವಾ ಸರ್ಕಾರ ಅವರನ್ನು ಇಲಾಖೆಯಿಂದ ಬದಲಾಯಿಸಬೇಕು’ ಎಂದೂ ಆಗ್ರಹಿಸಿದರು.</p>.<p>‘6 ರಂದು ನಡೆಯುವ ಪ್ರತಿಭಟನೆಗೆ ಅನೇಕ ಸಂಘಟನೆಗಳು ಬೆಂಬಲ ನೀಡಿವೆ. ಶಿಕ್ಷಕರು ಮತ್ತು ಆಡಳಿತ ವರ್ಗ, ಅಲ್ಪಸಂಖ್ಯಾತರ ಅಸೋಸಿಯೇಷನ್, ಟೀಚರ್ಸ್ ಅಂಡ್ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಮುಂತಾದ ಸಂಘಟನೆಗಳು ಬೆಂಬಲ ನೀಡಿವೆ’ ಎಂದೂ ಹೇಳಿದರು.</p>.<p><strong>‘ರುಪ್ಸಾ’ದ ಬೇಡಿಕೆಗಳು: </strong>ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳ ಶಿಕ್ಷಕರಿಗೆ ಪರಿಹಾರ ನೀಡಲು ಕನಿಷ್ಠ ಒಂದು ಸಾವಿರ ಕೋಟಿಯ ಪ್ಯಾಕೇಜ್ ಘೋಷಿಸಬೇಕು, ಸಂಬಳ ಇಲ್ಲದ ಶಿಕ್ಷಕರಿಗೆ ಪ್ರತಿ ತಿಂಗಳ ₹ 10 ಸಾವಿರ ನೀಡಬೇಕು, 1985ರಿಂದ ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು, 2020ರ ನ. 11ರಂದು ಹೊರಡಿಸಿರುವ ಸುತ್ತೋಲೆಯನ್ನು ಸರ್ಕಾರ ಮರು ಪರಿಶೀಲಿಸಬೇಕು, ಶಾಲೆಗಳ ಮಾನ್ಯತೆ ನವೀಕರಣವನ್ನು ಅದಾಲತ್ ರೂಪದಲ್ಲಿ ವಿಲೇವಾರಿ ಮಾಡಬೇಕು, ಗಡಿಭಾಗದ ಶಾಲೆಗಳ ಮುಚ್ಚುವ ನಿರ್ಧಾರ ಹಿಂಪಡೆಯಬೇಕು, 2020-21 ನೇ ಸಾಲಿನ ಆರ್ಟಿಇ ಹಣ ಒಂದೇ ಕಂತಿನಲ್ಲಿ ಮರು ಪಾವತಿ ಮಾಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>